ಶಿಷ್ಟಾಚಾರ ಉಲ್ಲಂಘನೆ ಆರೋಪ: ಪ್ರವಾಸೋದ್ಯಮ ಅಧಿಕಾರಿ ಕೊಟ್ರೇಶ್ವರಿಗೆ ಜಿಲ್ಲಾಧಿಕಾರಿಯಿಂದ ನೋಟಿಸ್

0
Spread the love

ಗದಗ;- ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿಗೆ ಶಿಷ್ಟಾಚಾರ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ವಿವರಣೆ ಕೇಳಿ ನೋಟಿಸ್ ನೀಡಲಾಗಿದೆ.

Advertisement

ಗದಗ ಜಿಲ್ಲಾಧಿಕಾರಿಗಳಿಂದ ನೋಟಿಸ್ ಜಾರಿ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಪತ್ರದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ಅ.21 ರಂದು ಗದಗ ನಗರದ ಭೀಷ್ಮಕೆರೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಹಾಯಿ ದೋಣಿ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿ. ಪ. ಸದಸ್ಯ ಎಸ್.ವಿ ಸಂಕನೂರ ಪ್ರವಾಸದಲ್ಲಿದ್ದಾಗ ಅವರ ಮನೆಗೆ ತಲುಪಿಸಲಾಗಿದೆ. ಆದ್ರೆ ಪ್ರವಾಸೋದಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಖುದ್ದಾಗಿ ಭೇಟಿ ನೀಡಿ ಆಮಂತ್ರಣ ನೀಡದ ಹಿನ್ನೆಲೆ, ಹಾಗೂ ಆಪ್ತಸಹಾಯಕರಿಗಾಗಲಿ ದೂರವಾಣಿ ಮೂಲಕ ಯಾವುದೇ ಮಾಹಿತಿ ನೀಡದ ಹಿನ್ನೆಲೆ, ವಿ. ಪ. ಸದಸ್ಯ ಎಸ್ ವಿ ಸಂಕನೂರ ಗದಗನಲ್ಲಿದ್ರೂ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಇದರಿಂದ ಅವಮಾನವಾಗಿ ನನ್ನ ಹಕ್ಕು ಚ್ಯುತಿಗೆ ಕಾರಣವಾಗಿದೆ ಎಂದು ಪತ್ರದಲ್ಲಿ ಸಂಕನೂರ ದೂರಿದ್ದಾರೆ.

ಪ್ರವಾಸೋದ್ಯಮ ಅಧಿಕಾರಿಗಳ ಮೇಲೆ ನಿಯಮಾನುಸಾರ ಶಿಸ್ತಿನ ಕ್ರಮ ಜರುಗಿಸಲು ಉಲ್ಲೇಖಿತ ಪತ್ರ ಬರೆಯಲಾಗಿದೆ. ಮೇಲ್ನೋಟಕ್ಕೆ ಶಿಷ್ಟಾಚಾರ ಉಲ್ಲಂಘನೆಯಾಗಿರುವುದು ಕಂಡು ಬಂದಿರೋ ಹಿನ್ನೆಲೆ, ಕಾರಣ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದು? ಎಂಬ ಬಗ್ಗೆ ವಿವರಣೆಯನ್ನು 03 ದಿನಗಳೊಳಗಾಗಿ ಈ ಕಾರ್ಯಾಲಯಕ್ಕೆ ಸಲ್ಲಿಸಲು ಜಿಲ್ಲಾಧಿಕಾರಿಗಳಿಂದ ನೋಟಿಸ್ ಜಾರಿ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here