ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ಶಿಪ್-2026 ಸ್ಪರ್ಧೆಗಳಲ್ಲಿ ಭಾಗವಹಿಸುವ ಗದಗ ಜಿಲ್ಲಾ ತಂಡವನ್ನು ಆಯ್ಕೆ ಮಾಡಲಾಗಿದೆ. ಗದಗ ಜಿಲ್ಲಾ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಶನ್ (ರಿ) ವತಿಯಿಂದ ಆಯೋಜಿಸಿದ್ದ 29ನೇ ಗದಗ ಜಿಲ್ಲಾ ಮಟ್ಟದ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ಶಿಪ್-2026ರಲ್ಲಿ ವಿಜೇತರಾದ ಸ್ಪರ್ಧಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೂನ್ 6 ಮತ್ತು 7ರಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ಶಿಪ್ನಲ್ಲಿ ಗದಗ ಜಿಲ್ಲೆಯ ಸ್ಪರ್ಧಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಲಿದ್ದಾರೆ.
ಬಾಲಕರ ವಿಭಾಗದಲ್ಲಿ ಹರ್ಷವರ್ಧನ ಕೊಲ್ಲರಿ, ನವೀನ ಪಲ್ಲೇದ, ವೆಂಕಟೇಶ ಹಾಲನ್ನವರ, ಆದಿತ್ಯ ಶೇಠ, ಮಲ್ಲಿಕಾರ್ಜುನ ಅಳಗವಾಡಿ, ಚೇತನ ಕೋಟೇಗೌಡ್ರ, ಫಕೀರಯ್ಯ ಕಲ್ಯಾಣಮಠ ಹಾಗೂ ಪ್ರಜ್ವಲ್ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಿಭಾಗದಲ್ಲಿ
ಅಪಾತ ಬೆಟಗೇರಿ, ಗೌರಿ ನೀಲಗುಂದ, ಲಕ್ಷ್ಮೀ ಬಸರಿ, ಶ್ರೀನವನಿಧಿ ಲದ್ದಿಯವರ, ಮನಿರಾಧಾ ಅಳಗವಾಡಿ, ಸಂಜನಾ ಮಡಿವಾಳರ, ನಮ್ರತಾ ವೆರ್ಣೇಕರ, ಪೂರ್ವಿ ಬಾಳನಗೌಡ್ರ ಹಾಗೂ ಸುಷ್ಮಾ ಮುಂದಿನಮನಿ ಆಯ್ಕೆಯಾಗಿದ್ದಾರೆ.
ಮಹಿಳೆಯರ ವಿಭಾಗದಲ್ಲಿ
ಸುಶ್ಮಿತಾ ಮಾರನಬಸರಿ, ಚೈತ್ರಾ ಸೋಮನಗೌಡ್ರ ಹಾಗೂ ನಿರ್ಮಲಾ ಕೊಟ್ರಣ್ಣನ್ನವರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಸ್ಪರ್ಧೆಯ ನಿರ್ಣಾಯಕರಾಗಿ ಚೇತನ ಚುಂಚಾ, ಸುಮಂಗಲಾ ಹದ್ಲಿ ಹಾಗೂ ಅನುರಾಧಾ ಶಿರಿಯಣ್ಣವರ ಕಾರ್ಯನಿರ್ವಹಿಸಲಿದ್ದಾರೆ.
ಗದಗ ಜಿಲ್ಲಾ ತಂಡಕ್ಕೆ ಆಯ್ಕೆಯಾದ ಸ್ಪರ್ಧಿಗಳು, ನಿರ್ಣಾಯಕರು ಹಾಗೂ ಪ್ರೋತ್ಸಾಹ ನೀಡಿದ ಪಾಲಕರಿಗೆ ಗದಗ ಜಿಲ್ಲಾ ಯೋಗ ಒಕ್ಕೂಟ, ಗದಗ ಜಿಲ್ಲಾ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಯೋಗಾಸನ ಕ್ರೀಡಾಭಿಮಾನಿಗಳ ಪರವಾಗಿ ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಕ್ರೀಡಾ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ಕೆ.ಎಸ್. ಪಲ್ಲೇದ ಹಾಗೂ ಬಸವ ಯೋಗ ಚಿಂತನ ಕೂಟದ ಅಧ್ಯಕ್ಷ ಎಂ.ಎಸ್. ಶಿರಿಯಣ್ಣವರ ಶುಭಾಶಯ ಕೋರಿದ್ದಾರೆ.



