ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಮಾನವ ಸರಪಳಿ ವೇಳೆ ಇಬ್ಬರು ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ನಡೆದಿದೆ.
Advertisement
ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಎಂಬ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮುಖ, ತಲೆ, ಮೈ, ಕೈಗೆ ತೀವ್ರವಾಗಿ ಕಚ್ಚಿವೆ. ನೋವಿನ್ನು ಸಹಿಸಲಾಗದೇ ಅಸ್ವಸ್ಥಗೊಂಡಿದ್ದಾರೆ.
ತಕ್ಷಣವೇ ಇಬ್ಬರು ಶಿಕ್ಷಕಿಯರಿಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.