ವಿಜಯಸಾಕ್ಷಿ ಸುದ್ದಿ, ಗದಗ: ನಾದದಿಂದಲೇ ಈ ಜಗತ್ತು ನಿರ್ಮಾಣಗೊಂಡಿದೆ. ನಮ್ಮ ಉಸಿರಾಟ, ಸುತ್ತಲಿನ ಪರಿಸರದ ಸಂಗತಿಗಳು ಸಂಗೀತದ ಹಿನ್ನೆಲೆಯಲ್ಲಿಯೇ ರೂಪುಗೊಂಡಿವೆ. ಸಂಗೀತ ಲೋಕದ ದಿಗ್ಗಜರಾದ ಡಾ. ಪಂಚಾಕ್ಷರಿ ಗವಾಯಿಗಳು ಹಾಗೂ ಪಂ. ಪುಟ್ಟರಾಜ ಗವಾಯಿಗಳು ಶಿಷ್ಯ, ಪ್ರಶಿಷ್ಯ ವರ್ಗದ ಮೂಲಕ ಹೊಸ ಸಂಗೀತ ಪರಂಪರೆಗೆ ಮುನ್ನುಡಿಯನ್ನು ಬರೆದು ಸಂಗೀತ ಕ್ಷೇತ್ರದಲ್ಲಿ ಗದುಗಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ರಾಜಗುರು ಪಂ. ಗುರುಸ್ವಾಮಿ ಕಲಕೇರಿ ತಿಳಿಸಿದರು.
ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಗೀತಗಾರ ಡಾ. ಎಸ್.ಎನ್. ಪಾಟೀಲ ಅವರ ಸ್ಮರಣಾರ್ಥ ಜರುಗಿದ ದತ್ತಿ ಉಪನ್ಯಾಸದಲ್ಲಿ ಮಾತನಾಡಿದರು.
ಡಾ. ಎಸ್.ಎನ್. ಪಾಟೀಲ ಅವರ ಸಂಸ್ಮರಣೆ ಮಾಡಿದ ಸಿಎನ್ಎ ಪಾಟೀಲ ಮಾತನಾಡಿ, ನಾಡಿನ ವಿವಿಧ ಭಾಗಗಳಲ್ಲಿ ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಶಿಷ್ಯವರ್ಗದವರು ವಿದೇಶಗಳಲ್ಲೂ ಹೆಸರು ಮಾಡಿದ್ದಾರೆ. ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಂಗೀತ ಸೇವೆ ಮಾಡಿದ ಎಸ್.ಎನ್. ಪಾಟೀಲ ಅವರು ಸಂಗೀತದ ಏಳ್ಗೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಹೆಸರಿನಲ್ಲಿರುವ ಪ್ರತಿಷ್ಠಾನ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜನೆಯೊಂದನ್ನು ಸಿದ್ಧಪಡಿಸಿದೆ ಎಂದು ತಿಳಿಸಿದರು.
ಮಕ್ಕಳ ದಿನಾಚರಣೆ ಅಂಗವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಬೆಳಗುತ್ತಿರುವ ಸಾಕ್ಷಿರವಿ ದೇವರಡ್ಡಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ರಾಹುಲ ವಸಂತ ಸಿದ್ಧಮ್ಮನಹಳ್ಳಿ ಅವರನ್ನು ಸನ್ಮಾನಿಸಲಾಯಿತು.
ನೀಲಮ್ಮ ಅಂಗಡಿ ಅವರಿಂದ ಗೀತಗಾಯನ ಜರುಗಿತು. ಕಿಶೋರಬಾಬು ನಾಗರಕಟ್ಟಿ ಸ್ವಾಗತಿಸಿದರು. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ರಾಹುಲ ಗಿಡ್ನಂದಿ ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ಧನೇಶ ದೇಸಾಯಿ, ಕೆ.ಎಚ್. ಬೇಲೂರ, ಡಾ. ಜಿ.ಬಿ. ಪಾಟೀಲ, ಎಸ್.ಯು. ಸಜ್ಜನಶೆಟ್ಟರ, ರಾಜಶೇಖರ ಕರಡಿ, ಅಶೋಕ ಸತ್ಯರಡ್ಡಿ, ಶಕುಂತಲಾ ಗಿಡ್ನಂದಿ, ಜಯನಗೌಡ ಪಾಟೀಲ, ಅಮರೇಶ ರಾಂಪೂರ, ರತ್ನಾ ಪುರಾಂತರ, ಶಶಿಕಾಂತ ಕೊರ್ಲಹಳ್ಳಿ, ಬೂದಪ್ಪ ಅಂಗಡಿ, ಸಿ.ಕೆ.ಎಚ್. ಕಡಣಿ ಶಾಸ್ತ್ರಿ, ಎಸ್.ಆರ್. ಚನ್ನಪಗೌಡರ, ರವಿ ದೇವರಡ್ಡಿ, ಉಮಾ ಕಣವಿ, ವಿ.ಎಸ್. ದಿಂಡೂರ, ಸುಶೀಲವ್ವ ಸಾಲಿ, ಕಾಶಮ್ಮ ಕೋಡಮಗ್ಗಿ, ಎಂ.ಬಿ. ಲಿಂಗಧಾಳ, ಈರನಗೌಡ ಮಣಕವಾಡ, ಡಿ.ಜಿ. ಕುಲಕರ್ಣಿ, ರಾ.ಗು. ಕಲಕೇರಿ, ರಾಜಶೇಖರ ದಾನರಡ್ಡಿ, ಚನ್ನವೀರಪ್ಪ ದುಂದೂರ, ಮುತ್ತು ದಿಂಡೂರ, ಡಾ. ಗಂಗೂಬಾಯಿ ಪವಾರ, ಯಾದವ್ವ ಅಂಗಡಿ, ವಸಂತ ಸಿದ್ಧಮ್ಮನಹಳ್ಳಿ, ಗಾಯತ್ರಿ ಸಿದ್ಧಮ್ಮನಹಳ್ಳಿ, ರಾಮಚಂದ್ರ ಮೋನೆ, ಅರುಣರಾಜ ಪುರೋಹಿತ, ಎಂ.ಎಚ್. ಸವದತ್ತಿ, ಕವಿತಾ ದಿಂಡೂರ, ರಾಜೇಶ್ವರಿ ಹೊಳಗುಂದಿ, ಬಿ.ಕೆ. ನಿಂಬನಗೌಡರ, ರವೀಂದ್ರ ಜೋಶಿ, ಷಡಕ್ಷರಿ ಮೆಣಸಿನಕಾಯಿ, ಆನಂದ ಹಡಪದ, ದಾಕ್ಷಾಯಿಣಿ ಗುಗ್ಗರಿ ಮೊದಲಾದವರು ಭಾಗವಹಿಸಿದ್ದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಪಂ. ಭೀಮಸೇನ ಜೋಶಿ ಅವರ ಕೊಡುಗೆ ಅಪಾರವಾದುದು. ವೀರೇಶ್ವರ ಪುಣ್ಯಾಶ್ರಮದಲ್ಲಿ ಅರಳಿದ ಪಂ. ವೆಂಕಟೇಶಕುಮಾರ ಅವರು ಗದುಗಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ನಾಡಿನ ಮೂಲೆ ಮೂಲೆಯಲ್ಲಿರುವ ಸಂಗೀತಗಾರರಿಗೆ ಗದಗ ಮೂಲ ನೆಲೆ ಹಾಗೂ ಶ್ರೇಯಸ್ಸಾಗಿದೆ ಎಂದು ತಿಳಿಸಿದರು.


