ಅಧಿವೇಶನದ ಇತಿಹಾಸ ಮರುಸೃಷ್ಟಿಗೆ ಸಿದ್ಧತೆ

0
``Gandhi Bharat'' programme
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ : ಬೆಳಗಾವಿಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವ ಸಮಿತಿ ಸಭೆಯ ತರುವಾಯ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ. ಪಾಟೀಲ ಪತ್ರಿಕಾಗೋಷ್ಠಿ ನಡೆಸಿ, ಬೆಳಗಾವಿಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲು ಯೋಜಿಸಿರುವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

Advertisement

ಮಹಾತ್ಮ ಗಾಂಧೀಜಿಯವರ ಅಕ್ಷತೆಯಲ್ಲಿ 1924ರಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನ ಆಚರಣೆ ಮೂಲಕ ಗಾಂಧೀಜಿಯವರ ತತ್ವ-ಸಿದ್ಧಾಂತಗಳನ್ನು ಇನ್ನಷ್ಟು ಪ್ರಚುಪಡಿಸಲು ಹಾಗೂ ಮನೆ ಮನೆಗೆ ಗಾಂಧೀಜಿ ಸಿದ್ಧಾಂತಗಳನ್ನು ತಲುಪಿಸುವ ಉದ್ದೇಶದಿಂದ `ಗಾಂಧೀ ಭಾರತ’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು.

ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ವಿವರಿಸಿದರು.

ಅಕ್ಟೋಬರ್ 2ರಿಂದ ಒಂದು ವರ್ಷದ ಕಾಲ ಶತಮಾನೋತ್ಸವ ವರ್ಷಾಚರಣೆ, ಅಂತಾರಾಷ್ಟ್ರೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ದೇಶಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರಕಾರ 25 ಕೋಟಿ ರೂಪಾಯಿ ನೀಡಲಿದ್ದು, ಅಗತ್ಯ ಬಿದ್ದರೆ ಹೆಚ್ಚುವರಿ ಹಣ ನೀಡಲಿದೆ ಎಂದು ಸಚಿವರಾದ ಎಚ್.ಕೆ. ಪಾಟೀಲ ವಿಶ್ವಾಸ ವ್ಯಕ್ತಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಮತ್ತು 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಎಚ್.ಕೆ. ಪಾಟೀಲ, ಗೌರವ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಸಮಿತಿಯ ರಾಜ್ಯ ಸಂಚಾಲಕ, ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್. ಶಂಕರ, ಸದಸ್ಯರಾದ ಎನ್.ಆರ್. ವಿಶುಕುಮಾರ್, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಫ್(ರಾಜು) ಸೇಠ್ ಮತ್ತಿತರರು ಉಪಸ್ಥಿತರಿದ್ದರು.

ಗಾಂಧೀಜಿಯವರ ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿ ಪತ್ರವನ್ನು ಬರೆದಿದ್ದಾರೆ. ಡಿಸೆಂಬರ್ 26-27 ಅಥವಾ ಜನವರಿ-2025ರಿಂದ ಅಕ್ಟೋಬರ್-2025ರ ಒಳಗಾಗಿ ದಿನಾಂಕ ನೀಡಲು ಕೋರಲಾಗಿದ್ದು, ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ ಮಾಹಿತಿ ನೀಡಿದರು.


Spread the love

LEAVE A REPLY

Please enter your comment!
Please enter your name here