ತುಮಕೂರು: ಮಾದಕ ವಸ್ತುಗಳ ನಶೆಗೆ ಬಲಿಯಾಗಿ ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಅನ್ನು ತುರುವೆಕೆರೆ ಪೊಲೀಸರು ಬೃಹತ್ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಈ ಗ್ಯಾಂಗ್ ಕನಿಷ್ಠ 22 ದೇವಸ್ಥಾನಗಳ ಬೀಗ ಮುರಿದು ಕಳವು ಮಾಡಿದ್ದು, ಹುಂಡಿ ಹಣ ಹಾಗೂ ಗರ್ಭಗುಡಿಯ ಚಿನ್ನದ ತಾಳಿಗಳನ್ನು ದೋಚುತ್ತಿದ್ದದು ಬಹಿರಂಗವಾಗಿದೆ.
ಬಂಧಿತರಿಂದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ದೇವಾಲಯದ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.
19 ರಿಂದ 29 ವರ್ಷದೊಳಗಿನ ಯುವಕರ ಈ ಗ್ಯಾಂಗ್ ಡ್ರಗ್ಸ್ ಚಟಕ್ಕೆ ದಾಸರಾಗಿ, ಕಳವು ಹಣವನ್ನು ಐಷಾರಾಮಿ ಜೀವನ ಹಾಗೂ ಮಾದಕ ವಸ್ತುಗಳ ಖರ್ಚಿಗೆ ಬಳಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಹಾಸನ ಮತ್ತು ಮಂಡ್ಯ ಮೂಲದ ಆರು ಮಂದಿ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೂ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
ತುರುವೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



