ಗಂಗಾ ನದಿಯಲ್ಲಿ ಅವಘಡ: ದೋಣಿ ಮಗುಚಿ ಮೂವರು ದುರ್ಮರಣ!

0
Spread the love

ಪಾಟ್ನಾ:- ಬಿಹಾರದ ಕತಿಹಾರ್ ಜಿಲ್ಲೆಯಲ್ಲಿನ ಗಂಗಾನದಿಯಲ್ಲಿ ದೋಣಿ ಮಗುಚಿ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಅಲ್ಲದೇ ಘಟನೆಯಲ್ಲಿ ನಾಲ್ವರು ನಾಪತ್ತೆ ಆಗಿದ್ದಾರೆ. 17 ಜನರಿದ್ದ ದೋಣಿ ಅಮ್ದಾಬಾದ್ ಪ್ರದೇಶದ ಗೋಲಾಘಾಟ್ ಬಳಿ ಮಗುಚಿಬಿದ್ದಿದೆ. ಇಲ್ಲಿಯವರೆಗೆ 10 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಅನೇಕರು ಈಜಿ ದಡ ಸೇರಿದ್ದಾರೆ. ನಾಪತ್ತೆಯಾದ ನಾಲ್ವರಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಮೃತಪಟ್ಟವರಲ್ಲಿ ಇಬ್ಬರನ್ನು 60 ವರ್ಷದ ಪವನ್ ಕುಮಾರ್ ಮತ್ತು 70 ವರ್ಷದ ಸುಧೀರ್ ಮಂಡಲ್ ಎಂದು ಗುರುತಿಸಲಾಗಿದ್ದು, ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here