ಬೆಂಗಳೂರು: ಕೋಲಾರದಿಂದ ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಗಾಂಜಾ ಪೆಡ್ಲರ್ಸ್ ಗಳನ್ನು ಕೆಜಿಹಳ್ಳಿ ಪೊಲೀಸರು ಬಂಧೀಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಸೈಯ್ಯಾದ್ ಇಮ್ರಾನ್, ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 3.12 ಲಕ್ಷ ಮೌಲ್ಯದ 51 ಕೆಜಿ ಮಾದಕವಸ್ತು ಗಾಂಜಾ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಕೋಲಾರದಿಂದ ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುವ ವೇಳೆ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಇನ್ನೂ ಘಟನೆ ಸಂಬಂಧ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.