ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ!

0
Spread the love

ಹಾಸನ:– ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ, ಹೆಂಟಗೆರೆ ವಾರ್ಡ್. ನಂ.17 ರಲ್ಲಿ ಜರುಗಿದೆ.

Advertisement

ಗಾಯಗೊಂಡವರನ್ನು ಅಲೀಂ ಬೇಗಂ (23), ರೋಹಿತ್ ಖಾತನ್ (19), ಇಸ್ತಾರ್ ಉಲ್ಲಾ (23), ಅಹಿಸ್ಲಮ್ (25) ಎಂದು ಗುರುತಿಸಲಾಗಿದೆ. ಹೆಂಟಿಗೆರೆ ಗ್ರಾಮದ ದೊಡ್ಡೇಗೌಡ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ವಾಸವಿದ್ದು ಬೆಳಿಗ್ಗೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡಿದೆ.

ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಕಾರ್ಮಿಕರ ಕೈ ಕಾಲುಗಳು ಸಂಪೂರ್ಣ ಸುಟ್ಟು ಹೋಗಿವೆ. ಅಲ್ಲದೇ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿವೆ. ಗಾಯಾಳುಗಳಿಗೆ ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here