ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರ ಕಂಚಿನ ಬಾಗಿಲು ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಘಟನೆ ಜರುಗಿದೆ.
ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಅರುಣ್ ಶೇಖ್ ಗಂಭೀರ ಗಾಯಗೊಂಡ ಚಾಲಕನಾಗಿದ್ದು, ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್ನಿಂದ ಉಡುಪಿ ಕಡೆಗೆ ಹೋಗುತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಟ್ಯಾಂಕರ್ ನಲ್ಲಿ ಇದ್ದ ಗ್ಯಾಸ್ ಲೀಕ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರ ಸಂಚಾರ ಬಂದ್ ಮಾಡಿದ್ದು, ಅಂಕೋಲ ದಿಂದ ಮಾದನಗೇರಿ ಹೆದ್ದಾರಿ ಮೂಲಕ ಮಾರ್ಗ ಬದಲು ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ NDR ತಂಡ ರವಾನೆ ಮಾಡಲಾಗಿದ್ದು, ಗ್ಯಾಸ್ ಸೋರಿಕೆಯನ್ನ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಘಟನೆ ಸಂಬಂಧ ಅಂಕೋಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


