ಬೆಂಗಳೂರು ಗೆಲ್ಲೋಕೆ ಆಗೊಲ್ಲ ಅಂತ ಜಿಬಿಎ ಮಾಡಿದ್ದಾರೆ; ಆರ್ ಅಶೋಕ್ ವಾಗ್ದಾಳಿ

0
Spread the love

ಬೆಂಗಳೂರು:- ಬೆಂಗಳೂರು ಗೆಲ್ಲೋಕೆ ಆಗೊಲ್ಲ ಅಂತ ಜಿಬಿಎ ಮಾಡಿದ್ದಾರೆ. ಆದ್ರೆ ನಾವು ಅಧಿಕಾರಕ್ಕೆ ಬಂದಮೇಲೆ ಇದನ್ನು ರದ್ದು ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದ್ರೆ ಜಿಬಿಎ ತೆಗೆದು, ಒಂದೇ ಕಾರ್ಪೋರೇಷನ್ ಮಾಡ್ತೀವಿ. ಕೆಂಪೇಗೌಡ ಕಟ್ಟಿದ ನಾಡನ್ನ ಒಂದೇ ಮಾಡ್ತೀವಿ. ಜಿಬಿಎ ನಾವು ರದ್ದು ಮಾಡ್ತೀವಿ. ಅಧಿಕಾರ ವಿಕೇಂದ್ರೀಕರಣ ಅಂದರೆ 5 ಪಾಲಿಕೆ ಮಾಡಿದ ಹಾಗೇ ರಾಜ್ಯವನ್ನು ಭಾಗ ಮಾಡ್ತೀರಾ? 5 ಸಿಎಂ ಆಗೋಕೆ ಒಪ್ಪುತ್ತೀರಾ? ಬೆಂಗಳೂರು ಗೆಲ್ಲೋಕೆ ಆಗೊಲ್ಲ ಅಂತ ಕಾಂಗ್ರೆಸ್‍ಗೆ ಗೊತ್ತು. ಅದಕ್ಕೆ ಜಿಬಿಎ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಲವು ಶಾಸಕರು ಅನುಮತಿ ಪಡೆದು ಬೇರೆ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಜಿಬಿಎ ಮೊದಲ ಸಭೆ ಇವತ್ತು ಸರ್ಕಾರ ಮಾಡ್ತಿದೆ. ಸರ್ಕಾರ ಅಂತ ಹೇಳಬೇಕಾ ಅಂತ ಅನುಮಾನ ಬಂದಿದೆ. ಸರ್ಕಾರ ಅಂದರೆ ಕಾನೂನು, ಸಂವಿಧಾನ ಎಲ್ಲ ಇರಬೇಕು. ನಿನ್ನೆ ಸಭೆ ಇದೆ ಅಂತ ಫೋನ್ ಮಾಡಿದ್ರು. ಇವತ್ತು ಬೆಳಗ್ಗೆ 12 ಗಂಟೆಗೆ ಅಜೆಂಡಾ ಕೊಟ್ಟರು. ಸಂಜೆ 4 ಗಂಟೆಗೆ ಮೀಟಿಂಗ್ ಅಂತ ಹೇಳಿದ್ದಾರೆ. ಸಭೆ ಮಾಡಬೇಕಾದ್ರೆ 7 ದಿನ ಮುಂಚೆ ನೊಟೀಸ್ ಕೊಡಬೇಕು ಎಂದಿದ್ದಾರೆ.

ಅಧಿವೇಶನದಲ್ಲಿ ಬಿಲ್ ಕೊಡಬೇಕಾದ್ರೆ ಮೊದಲು ಕೊಡ್ತಾರೆ. ಜಿಬಿಎ ಅಜೆಂಡಾ ಓದೋಕೆ ಆಗೊಲ್ಲ. 12 ಗಂಟೆಗೆ ಅಜೆಂಡಾ ಕೊಟ್ಟಿದ್ದಾರೆ. ಹೇಗೆ ನಾವು ಓದೋದು? ನೋಟಿಸ್ ಕೊಟ್ಟಿರೋದು ನಮಗೆ ಗೊತ್ತಿಲ್ಲ. ಇವರ ಯೋಗ್ಯತೆ ಏನು ಅಂತ ಗೊತ್ತಾಗ್ತಿದೆ. ಇವರಿಗೆ ಜವಾಬ್ದಾರಿ ಇದೆಯಾ ಎಂದು ವಾಗ್ದಾಳಿ ನಡೆಸಿದ್ದಾರೆ


Spread the love

LEAVE A REPLY

Please enter your comment!
Please enter your name here