ಚುನಾವಣಾ ಪ್ರಕ್ರಿಯೆಯ ಪೂರ್ಣ ತಿಳುವಳಿಕೆ ಪಡೆಯಿರಿ

0
dc
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಚುನಾವಣಾ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳ್ಳುವಲ್ಲಿ ಪಿಆರ್‌ಓ ಮತ್ತು ಅವರ ತಂಡಗಳ ಕಾರ್ಯ ಮುಖ್ಯವಾಗಿದ್ದು, ತರಬೇತಿಯಲ್ಲಿ ಇವಿಎಂ ಮತ್ತು ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು, ಯಾವುದೇ ರೀತಿಯಲ್ಲಿ ಚುನಾವಣಾ ಕರ್ತವ್ಯ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

Advertisement

ಅವರು ಬುಧವಾರ ಬೆಳಿಗ್ಗೆ ಜಿಲ್ಲೆಯ ವಿವಿಧ ವಿಧಾನಸಭಾ ಮತಕ್ಷೇತ್ರಗಳಲ್ಲಿ ನಡೆಯುತ್ತಿರುವ ಪಿಆರ್‌ಓ ಮತ್ತು ಎಪಿಆರ್‌ಓ, ಪಿಓ 1, ಪಿಈ 2 ಅವರ 2ನೇ ಹಂತದ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ, ನವಲಗುಂದ ಶಂಕರ ಕಾಲೇಜಿನಲ್ಲಿನ ತರಬೇತಿಯಲ್ಲಿ ಭಾಗವಹಿಸಿ, ಮಾತನಾಡಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನ ದಿನ ಬಹು ಮುಖ್ಯವಾಗಿದೆ. ಅಂದು ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಅವರ ತಂಡ ಮೈ ಎಲ್ಲಾ ಕಣ್ಣಾಗಿಸಿ ಕೆಲಸ ಮಾಡಬೇಕು. ಚುನಾವಣಾ ಆಯೋಗ ನೀಡಿರುವ ಎಲ್ಲ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಮತದಾನ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣಾ ಸಿಬ್ಬಂದಿಗಳಿಗೆ ಜಿಪಿಎಸ್ ಇರುವ ವಾಹನ ನೀಡಲಾಗುತ್ತದೆ. ಗೊತ್ತುಪಡಿಸಿದ ವಾಹನದಲ್ಲಿ ಮತ್ತು ನಿಗದಿತ ಮಾರ್ಗದಲ್ಲಿ ಸಂಚರಿಸಬೇಕು ಎಂದು ತಿಳಿಸಿದರು.

ಮತದಾನದ ಹಿಂದಿನ ದಿನ ಮತ್ತು ಮತದಾನ ಮುಗಿದ ನಂತರ ಮತಗಟ್ಟೆ ಸಿಬ್ಬಂದಿಗಳು ತಮಗೆ ಗೋತ್ತುಪಡಿಸಿದ ವಾಹನದಲ್ಲಿ ತೆರಳಬೇಕು. ಬೇರೆ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲ. ಚುನಾವಣೆ ದಿನ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಇರಲಿ. ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಕರ್ತವ್ಯ ನಿರ್ವಹಿಸಿ ಎಂದು ಅವರು ತಿಳಿಸಿದರು.

ಮತದಾನ ಹೆಚ್ಚಳಕ್ಕೆ ಚುನಾವಣಾ ಆಯೋಗದ ನಿರ್ದೇಶನದಂತೆ ಸ್ವೀಪ್ ಕಾರ್ಯಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ನಿರಂತರವಾಗಿ ಹಮ್ಮಿಕೊಳ್ಳಲಾಗಿದೆ. ಮತದಾನ ಜಾಗೃತಿಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಡಳಿತವು ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ.80ಕ್ಕಿಂತ ಹೆಚ್ಚು ಮಾಡುವ ಗುರಿ ಹೊಂದಿದೆ. ಮತಗಟ್ಟೆಗೆ ಬರುವ ಗರ್ಭೀಣಿಯರು, ಹಿರಿಯ ನಾಗರಿಕರು, ವಿಶೇಷಚೇತನರಿಗೆ ಆದ್ಯತೆ ನೀಡಿ, ಬೇಗ ಮತಚಲಾಯಿಸಲು ಅವಕಾಶ ಮಾಡಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನವಲಗುಂದ ಸಹಾಯಕ ಚುನಾವಣಾಧಿಕಾರಿ ದೇವರಾಜ್ ಆರ್, ತರಬೇತಿ ನೋಡಲ್ ಅಧಿಕಾರಿ ಚನ್ನಪ್ಪ ಎ., ತಹಸೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ, ರಾಜು ಮಾವರಕರ ಸೇರಿದಂತೆ ವಿವಿಧ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಅನುಮತಿಸಿದ ವ್ಯಕ್ತಿಗಳನ್ನು ಹೊರತುಪಡಿಸಿ, ಬೇರೆಯವರಿಗೆ ಅವಕಾಶ ನೀಡಬೇಡಿ. ನಿಮಗೆ ಯಾವುದೇ ರೀತಿಯ ತಾಂತ್ರಿಕ ಅಥವಾ ಬೇರೆ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಸೆಕ್ಟರ್ ಅಧಿಕಾರಿಗೆ ಮಾಹಿತಿ ನೀಡಿ, ಸರಿಪಡಿಸಿಕೊಳ್ಳಿ. ಮತದಾನಕ್ಕೆ ಆಗಮಿಸುವ ಮತದಾರರಿಗೆ ಕುಡಿಯುವ ನೀರು, ನೆರಳು, ಶೌಚಾಲಯ, ಸರತಿ ಸಾಲು ಎಲ್ಲವೂ ವ್ಯವಸ್ಥಿತವಾಗಿ ಲಭಿಸುವಂತೆ ನೋಡಿಕೊಳ್ಳಿ. ನಿಮ್ಮ ಸಹಾಯಕ್ಕೆ ಬಿಎಲ್‌ಓ, ಆಶಾ, ಗ್ರಾಮಲೆಕ್ಕಾಧಿಕಾರಿ ಸೇರಿದಂತೆ ವಿವಿಧ ಸಿಬ್ಬಂದಿಗಳು ಇರುತ್ತಾರೆ. ಮತದಾನವು ಶಾಂತವಾಗಿ, ಮುಕ್ತ ಮತ್ತು ಯಾವುದೇ ಪಕ್ಷಪಾತವಿಲ್ಲದೆ ನಡೆಯುವಂತೆ ಜಾಗೃತಿವಹಿಸಬೇಕೆಂದು ಚುನಾವಣಾಧಿಕಾರಿ ದಿವ್ಯ ಪ್ರಭು ಹೇಳಿದರು.


Spread the love

LEAVE A REPLY

Please enter your comment!
Please enter your name here