HomeGadag Newsಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಖ್ಯಾತ ವೈದ್ಯ ಡಾ. ಧನ್ನೂರ ಆಗ್ರಹ

ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಖ್ಯಾತ ವೈದ್ಯ ಡಾ. ಧನ್ನೂರ ಆಗ್ರಹ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನಾಲ್ಕು ಬಾರಿ ರೋಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವರಾಗಲು ಎಲ್ಲ ರೀತಿಯ ಅರ್ಹತೆ ಹೊಂದಿದ್ದು, ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಅವರ ಅನುಭವ ಮತ್ತು ನಾಯಕತ್ವವನ್ನು ಸರ್ಕಾರ ಬಳಸಿಕೊಳ್ಳಬೇಕು ಎಂದು ಪಟ್ಟಣದ ಖ್ಯಾತ ವೈದ್ಯ ಡಾ. ಕೆ.ಬಿ. ಧನ್ನೂರ ಆಗ್ರಹಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲ ಅವರು ಸರ್ವ ಸಮಾಜವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ ನಾಯಕತ್ವದ ಗುಣ ಹೊಂದಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ದೂರದೃಷ್ಟಿ ಹೊಂದಿರುವ ಅವರು ರೋಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರರೆಂದೇ ಜನಮಾನಸದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.

ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸದಾ ಬೆಂಬಲ ನೀಡುವ ಜಿ.ಎಸ್. ಪಾಟೀಲ ಅವರು ಜನಪರ ರಾಜಕಾರಣಿಯಾಗಿ ಹೆಸರುವಾಸಿಯಾಗಿದ್ದಾರೆ. ಇಂತಹ ಅನುಭವಿ ಹಾಗೂ ಮುತ್ಸದ್ದಿ ನಾಯಕರಿಗೆ ಸಚಿವ ಸ್ಥಾನ ನೀಡುವುದರಿಂದ ಸರ್ಕಾರಕ್ಕೂ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಎಂ.ಎಸ್. ಧಡೇಸೂರಮಠ ಮಾತನಾಡಿ, ಜಿ.ಎಸ್. ಪಾಟೀಲ ಅವರು ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನಗಳ ಯಶಸ್ಸಿನಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ನರೇಗಲ್ಲದ ಬೀಚಿ ಬಳಗದ ದಶಮಾನೋತ್ಸವ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವರು ಉದಾರವಾಗಿ ಸಹಾಯ ನೀಡಿದ್ದಾರೆ ಎಂದು ಹೇಳಿದರು.

ಸಾಹಿತ್ಯ, ಸಂಸ್ಕೃತಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಬೆಂಬಲ ನೀಡುತ್ತಿರುವ ಜಿ.ಎಸ್. ಪಾಟೀಲ ಅವರಂತಹ ನಾಯಕರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಸೂಕ್ತ ಎಂಬುದು ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.

ಈ ಆಗ್ರಹ ಪತ್ರಕ್ಕೆ ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಳಪ್ಪ ಸೋಮಗೊಂಡ, ಸಕ್ರೆಪ್ಪ ಹಡಪದ, ಶಶಿಧರ ಓದುಸೂಮಠ, ರಾಜು ಧರ್ಮಾಯತ, ಬಸಣ್ಣ ಕಳಕಣ್ಣವರ, ವೀರೇಶ ಪಿಡಗೊಂಡ, ಮುತ್ತಪ್ಪ ಹಡಪದ ಸೇರಿದಂತೆ ಹಲವರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.

“ನಾಲ್ಕು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಜಿ.ಎಸ್. ಪಾಟೀಲ ಅವರು ಅಭಿವೃದ್ಧಿ ಪರ ಚಿಂತನೆ, ಜನಸ್ನೇಹಿ ನಾಯಕತ್ವ ಮತ್ತು ಮುತ್ಸದ್ದಿತನದಿಂದ ಗುರುತಿಸಿಕೊಂಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸರ್ಕಾರ ಅವರ ಅನುಭವವನ್ನು ಸದುಪಯೋಗಪಡಿಸಿಕೊಳ್ಳಬೇಕು.”

– ಡಾ. ಕೆ.ಬಿ. ಧನ್ನೂರ, ಹಿರಿಯ ವೈದ್ಯರು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!