ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ಅವರು ಚಿನ್ನದ ಕಳ್ಳಸಾಗಣೆ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರ ಪ್ರಕರಣದ ತನಿಖೆ ನಡೆದಂತೆಲ್ಲಾ ಅನೇಕ ಮಾಹಿತಿಗಳು ಹೊರಬೀಳುತ್ತಿವೆ. ಇದೀಗೆ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಪತಿ ಜತೀನ್ಗೆ ಹೈಕೋರ್ಟ್ ಇತ್ತೀಚೆಗೆ ರಿಲೀಫ್ ನೀಡಿತ್ತು.
ಇದರ ಬೆನ್ನಲ್ಲೇ ಬಲವಂತದ ಕ್ರಮ ಕೈಗೊಳ್ಳದಂತೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಮಾಡಿದ ನ್ಯಾ.ಹೇಮಂತ್ ಚಂದನಗೌಡರ್ ಪೀಠ, ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿ,
ಅರ್ಜಿಯ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ. ಯಾವಾಗ ಆಕ್ಷೇಪಣೆ ಅರ್ಜಿ ಸಲ್ಲಿಕೆ ಮಾಡುತ್ತೀರಿ ಎಂದು ಜಡ್ಜ್ ಪ್ರಶ್ನಿಸಿದ್ದು, ಸೋಮವಾರ ಆಕ್ಷೇಪಣೆ ಸಲ್ಲಿಸುವುದಾಗಿ ಡಿಆರ್ಐ ಪರ ವಕೀಲರು ಹೇಳಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 24ಕ್ಕೆ ಮುಂದೂಡಿದ್ದು, ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.