HomeBengaluru Newsಈರುಳ್ಳಿ ದರ ಏರಿಕೆ ನಡುವೆ ಗುಡ್‌ನ್ಯೂಸ್: ಹಾಫ್‌ರೇಟ್‌ನಲ್ಲಿ SALE!

ಈರುಳ್ಳಿ ದರ ಏರಿಕೆ ನಡುವೆ ಗುಡ್‌ನ್ಯೂಸ್: ಹಾಫ್‌ರೇಟ್‌ನಲ್ಲಿ SALE!

For Dai;y Updates Join Our whatsapp Group

ಬೆಂಗಳೂರು: ಈರುಳ್ಳಿ ದರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಇದೀಗ ಗುಡ್‌ನ್ಯೂಸ್ ಸಿಕ್ಕಿದೆ.

ಮಾರುಕಟ್ಟೆಯಲ್ಲಿ ಕೆ.ಜಿಗೆ 65ರಿಂದ 75 ರೂಪಾಯಿವರೆಗೆ ಮಾರಾಟವಾಗುತ್ತಿದ್ದ ಈರುಳ್ಳಿ, ಬೆಂಗಳೂರಿನಲ್ಲಿ ಇದೀಗ ಕೇವಲ 35 ರೂಪಾಯಿಗೆ ಸಿಗುತ್ತಿದೆ.

ಕೇಂದ್ರ ಸರ್ಕಾರದ ನಾಫೆಡ್ ಮೂಲಕ ಬೆಂಗಳೂರಿಗೆ ಈರುಳ್ಳಿ ತರಲಾಗಿದ್ದು, ನಗರದ ವಿವಿಧ ಭಾಗಗಳಲ್ಲಿ ನಾಫೆಡ್ ವಾಹನಗಳ ಮೂಲಕ ಕೆ.ಜಿಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಅಗ್ಗದ ದರದಲ್ಲಿ ಈರುಳ್ಳಿ ಸಿಗುತ್ತಿರುವ ಹಿನ್ನೆಲೆಯಲ್ಲಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.

ಅಷ್ಟಕ್ಕೂ ನಾಫೆಡ್ ಎಂದರೇನು? ಈರುಳ್ಳಿ ಬೆಲೆ ನಿಯಂತ್ರಣದಲ್ಲಿ ನಾಫೆಡ್ ಪಾತ್ರವೇನು?

NAFED ಎಂದರೆ National Agricultural Cooperative Marketing Federation of India. ಇದು ರೈತರ ಹಿತಕ್ಕಾಗಿ ಕೆಲಸ ಮಾಡುವ ಸಹಕಾರಿ ಸಂಸ್ಥೆಯಾಗಿದ್ದು, ರೈತರಿಗೆ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವುದರ ಜೊತೆಗೆ ಗ್ರಾಹಕರಿಗೆ ಅಗತ್ಯ ವಸ್ತುಗಳು ನ್ಯಾಯಯುತ ದರದಲ್ಲಿ ಸಿಗುವಂತೆ ಕ್ರಮ ಕೈಗೊಳ್ಳುತ್ತದೆ.

ಮಾರುಕಟ್ಟೆಯಲ್ಲಿ ಈರುಳ್ಳಿ, ಆಲೂಗಡ್ಡೆ, ಧಾನ್ಯಗಳು ಹಾಗೂ ಎಣ್ಣೆಕಾಳುಗಳ ಬೆಲೆ ಕುಸಿದಾಗ ರೈತರಿಗೆ ಬೆಂಬಲ ನೀಡಲು ನಾಫೆಡ್ ಉತ್ಪನ್ನಗಳನ್ನು ಖರೀದಿಸುತ್ತದೆ.

ಇನ್ನು ಅಗತ್ಯ ವಸ್ತುಗಳ ಬೆಲೆ ಮಾರುಕಟ್ಟೆಯಲ್ಲಿ ಹೆಚ್ಚಾದಾಗ, ನಾಫೆಡ್ ಸಂಗ್ರಹಿಸಿಟ್ಟಿರುವ ದಾಸ್ತಾನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತದೆ. ಇದರಿಂದ ಪೂರೈಕೆ ಹೆಚ್ಚಿಸಿ ಬೆಲೆ ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಲಾಗುತ್ತದೆ.

ಸದ್ಯ ಈರುಳ್ಳಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನಾಫೆಡ್‌ನಿಂದ ಬೆಂಗಳೂರಿಗೆ ಈರುಳ್ಳಿ ತರಿಸಿ, ಕೆ.ಜಿಗೆ 35 ರೂಪಾಯಿಯಂತೆ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ.

ಒಟ್ಟಾರೆ, ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಬೆಂಗಳೂರಿನ ಗ್ರಾಹಕರಿಗೆ ನಾಫೆಡ್ ಮೂಲಕ ಅಗ್ಗದ ದರದಲ್ಲಿ ಈರುಳ್ಳಿ ಸಿಗುತ್ತಿರುವುದು ಕೊಂಚ ನೆಮ್ಮದಿ ತಂದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img