ರೈತರಿಗೆ ಸಿಹಿ ಸುದ್ದಿ: ಜೂನ್ ನಲ್ಲೇ ಭರ್ತಿಯಾಗಿ ದಾಖಲೆ ಬರೆದ KRS ಡ್ಯಾಂ!

0
Spread the love

ಮಂಡ್ಯ:- ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ. ಇದರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದಾಖಲೆಯೊಂದನ್ನು ಬರೆಯುವ ಅವಕಾಶ ಒದಗಿಬಂದಿದೆ. ಮುಂದಿನ 3 ದಿನಗಳ ಒಳಗಾಗಿ ಬಾಗಿನ ಅರ್ಪಿಸಿದರೆ, ಜೂನ್ ತಿಂಗಳಲ್ಲಿಯೇ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ.

Advertisement

ಸಾಮಾನ್ಯವಾಗಿ ಕೆಆರ್​ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದೆ. ಈ ವರ್ಷ ಅವಧಿಪೂರ್ವ ಮುಂಗಾರು ಮಳೆಯ ಕಾರಣ, ಜೂನ್ ಆರಂಭದಲ್ಲೇ ಡ್ಯಾಂ ನೀರಿನ ಮಟ್ಟ 100 ಅಡಿ ದಾಟುವ ಮೂಲಕ ದಾಖಲೆ ಬರೆದಿತ್ತು. ಸಾಮಾನ್ಯವಾಗಿ ಕೆಆರ್​ಎಸ್​ ಜಲಾಶಯದಲ್ಲಿ ಜೂನ್ ಅಂತ್ಯ ಅಥವಾ ಜುಲೈನಲ್ಲಿ ಮಾತ್ರ ನೀರಿನ ಮಟ್ಟ 100 ಅಡಿ ದಾಟುತ್ತದೆ. ಈ ವರ್ಷ ಜೂನ್ 15 ರಂದೇ ಡ್ಯಾಂ ನೀರಿನ ಮಟ್ಟ 115.78 ಅಡಿ ತಲುಪಿತ್ತು. ಅದಾದ ಹತ್ತು ದಿನಗಳಲ್ಲಿ ಇದೀಗ ಗರಿಷ್ಠ ಮಟ್ಟ ತಲುಪಿದೆ. ವಿಶೇಷವೆಂದರೆ, ಈ ಬಾರಿ ಜೂನ್ ಕೊನೆಯ ವಾರವೇ ಡ್ಯಾಂ ಭರ್ತಿಯಾಗಿದೆ.


Spread the love

LEAVE A REPLY

Please enter your comment!
Please enter your name here