ರೈತರಿಗೆ ಸಿಹಿಸುದ್ದಿ: ಭಾರೀ ಮಳೆಯಿಂದ KRS ಒಳಹರಿವು ಹೆಚ್ಚಳ!

0
Spread the love

ಮಂಡ್ಯ:- ಜಿಲ್ಲೆಯ ರೈತರಿಗೆ ಗುಡ್​​ನ್ಯೂಸ್​ ಸಿಕ್ಕಿದ್ದು, ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳವಾಗಿದೆ. ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನದಿಂದ ಮಳೆ ಪ್ರಮಾಣ ಉತ್ತಮವಾಗಿರುವುದರಿಂದ ಹಳ್ಳ-ಕೊಳ್ಳ, ಕೆರೆ ಕಟ್ಟೆಗಳಲ್ಲಿ ಜೀವ ಕಳೆಬಂದಿದೆ. ಇನ್ನೂ ಅನ್ನದಾತ ಪಾಲಿನ ಜೀವನಾಡಿ ನದಿಗಳ ಒಳಹರಿವು ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಕೃಷ್ಣರಾಜ ಸಾಗರ ಜಲಾಶಯದ ಒಳ ಹರಿವು ಬೆಳಿಗ್ಗೆಗಿಂತ ಮತ್ತಷ್ಟು ಏರಿಕೆಯಾಗಿದೆ. ಇದರಿಂದ ರೈತರಲ್ಲಿ ಮಂದಹಾಸ ಮೂಡಿಸಿದೆ.

Advertisement

ಇಂದು ಬೆಳಿಗ್ಗೆ 89 ಅಡಿ ನೀರಿನ ಮಟ್ಟ ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ ಹೆಚ್ಚುವರಿ 1 ಅಡಿ ನೀರು ಹರಿದುಬಂದಿತ್ತು. ಅದು ಸಂಜೆ ವೇಳೆ ಸಂಜೆ ವೇಳೆಗೆ 90.20 ಅಡಿಗೆ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಕೆಆರ್​ ಎಸ್​ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದರಿಂದ ರೈತರಲ್ಲಿ ಮಂದಹಾಸ ಮೂಡಿದೆ. ನಿನ್ನೆಯ 150 ಕ್ಯೂಸೆಕ್ ಮಾತ್ರ ಒಳಹರಿವು ಇತ್ತು. ಇಂದು ಏಕಾಏಕಿ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಈ ಬಾರಿ ಸಂಪೂರ್ಣವಾಗಿ ಭರ್ತಿಯಾಗುವ ನಿರೀಕ್ಷೆಗಳಿವೆ.


Spread the love

LEAVE A REPLY

Please enter your comment!
Please enter your name here