ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

0
Spread the love

ಬೆಂಗಳೂರು;- ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ನಿಗದಿತ ಅವಧಿಯೊಳಗೆ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ.

Advertisement

ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಮಾಸಿಕವಾಗಿ ಪಾವತಿ ಮಾಡುವ ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಹಂತ ಹಂತವಾಗಿ ಪಾವತಿ ಮಾಡಲು ವೇಳಾಪಟ್ಟಿ ಸಿದ್ದ ಪಡಿಸಿ ನಿಗದಿತ ಸಮಯಕ್ಕೆ ತಲುಪಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.

ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡುವ ಸಲುವಾಗಿ ಡಿ.ಡಿ.ಓ, ಡಿ.ಬಿ.ಟಿ ಸಲ್ ಮತ್ತು ಖಜಾನೆಗಳಿಗೆ ಯಾವುದೇ ರೀತಿಯ ತಾಂತ್ರಿಕ /ಆಡಳಿತಾತ್ಮಕ ಸಮಸ್ಯೆ ಎದುರಾದರೆ ಬಗೆಹರಿಸಲು ಸೂಚಿಸಲಾಗಿದೆ.ಅದೇ ರೀತಿ, ಪ್ರತಿ ಹಂತದಲ್ಲೂ ಸಮನ್ವಯೀಕರಣ ಸುಲಭಗೊಳಿಸಲು ತಿಳಿಸಲಾಗಿದೆ.

ಈ ಕುರಿತು ಖಜಾನೆ ಆಯುಕ್ತರ ಪ್ರಸ್ತಾವನೆ ಮಾಡಲಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಟ್ರೀಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ ಮೂಲಕ ಫಲಾನುಭವಿಗಳ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ಪಾವತಿ ಮಾಡಲಾಗುತ್ತಿದೆ.

ಈ ನಿಟ್ಟಿನಲ್ಲಿ ಡಿ.ಬಿ.ಟಿ ಮತ್ತು ಖಜಾನೆ-2 ರ ಮೂಲಕ ಹಣವನ್ನು ನೇರವಾಗಿ ವರ್ಗಾವಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here