ಚಿತ್ರದುರ್ಗ:- ಹೃದಯಾಘಾತದಿಂದ ಸರ್ಕಾರಿ ಆಸ್ಪತ್ರೆಯ ವೈದ್ಯರೋರ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅರಸನಘಟ್ಟ ಗ್ರಾಮದಲ್ಲಿ ಜರುಗಿದೆ.
Advertisement
ಡಾ. ಎನ್. ಸಂದೀಪ(48) ಮೃತ ವೈದ್ಯ. ಸಂದೀಪ್, ಶಿವಮೊಗ್ಗದ ಹೊಳೆಹೊನ್ನೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಇದ್ದಕ್ಕಿದ್ದಂತೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಜುಲೈ 28 ರಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಡಾ. ಸಂದೀಪ ಸಾವನ್ನಪ್ಪಿದ್ದಾರೆ. ಸ್ವಗ್ರಾಮ ಅರಸನಘಟ್ಟದಲ್ಲಿ ಡಾ. ಸಂದೀಪ ಅಂತ್ಯಸಂಸ್ಕಾರ ನೆರವೇರಿದೆ. ವೈದ್ಯನೇ ಹೃದಯಾಘಾತಕ್ಕೆ ಬಲಿ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ.