ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ: ಸಚಿವ ಹೆಚ್.ಕೆ. ಪಾಟೀಲ್

0
Spread the love

ಬೆಂಗಳೂರು: ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ.

Advertisement

ರೈತರಿಗೆ ನೋಟಿಸ್‌ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಎಂ. ಬಿ ಪಾಟೀಲ್ ಹೇಳಿದ್ದಾರೆ. ಸರ್ಕಾರ ನೋಟಿಸ್‌ ವಾಪಸ್ ಪಡೆಯಲಿದೆ. ಅಲ್ಲಿನ ತಹಸೀಲ್ದಾರ ತಪ್ಪು ಮಾಡಿದ್ದಾರೆ. ಹೀಗಾಗಿ ನೋಟಿಸ್‌ ವಾಪಸ್ ಪಡೆಯೋ ಕೆಲಸ ಮಾಡ್ತೀವಿ. ರಾಜಕೀಯವಾಗಿ ಆರೋಪ ಮಾಡೋದು ಸರಿಯಲ್ಲ ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here