HomeGadag Newsಮಾ. 11ರಿಂದ ಸರ್ಕಾರಿ ವೈದ್ಯಾಧಿಕಾರಿ–ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಮಲ್ಲಿಕಾರ್ಜುನ

ಮಾ. 11ರಿಂದ ಸರ್ಕಾರಿ ವೈದ್ಯಾಧಿಕಾರಿ–ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಮಲ್ಲಿಕಾರ್ಜುನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಇಲಾಖೆಯ ಪ್ರಮುಖ ಬೇಡಿಕೆಗಳನ್ನು ಹಲವು ಬಾರಿ ಸರ್ಕಾರದ ಗಮನಕ್ಕೆ ತರಲಾಗಿದೆ. ಆದಾಗ್ಯೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೋರಾಟದ ಮಾರ್ಗ ಹಿಡಿಯಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಮಾರ್ಚ್ 11ರಿಂದ 15ರವರೆಗೆ ರಾಜ್ಯದ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ನೌಕರರು ಕಪ್ಪುಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಈ ಅವಧಿಯಲ್ಲಿ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಹೊರಬರದಿದ್ದರೆ, ಮಾರ್ಚ್ 16ರಿಂದ ತುರ್ತು ಸೇವೆಗಳನ್ನೂ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಗೈರುಹಾಜರಾಗಿ ಮುಷ್ಕರ ಮುಂದುವರಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಹಾಗೂ ನೌಕರರ ಹೋರಾಟಕ್ಕೆ ಸಂಘದಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಸಂಘದ ಜಿಲ್ಲಾಧ್ಯಕ್ಷ ಡಾ. ಶರಣು ಗಾಣಿಗೇರ, ಮಲ್ಲಿಕಾರ್ಜುನ ಕಲಕಂಬಿ, ಡಾ. ಅರುಣಪ್ರಸಾದ, ಅಜಯಕುಮಾರ ಕಲಾಲ, ಡಾ. ಪ್ರಲ್ಹಾದ ಹೊಸಮನಿ, ರವಿ ಗುಂಜೀಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಮುಖ ಬೇಡಿಕೆಗಳು

*ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕ ಔಷಧಿಗಳ ಸರಬರಾಜು

*ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ

*ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ನಿಯಮಿತವಾಗಿ ಪ್ರಕಟಣೆ

*ಅರ್ಹ ಅಧಿಕಾರಿ–ನೌಕರರಿಗೆ ಮುಂಬಡ್ತಿ ನೀಡುವುದು ಸೇರಿದಂತೆ ಇತರ ಆಡಳಿತಾತ್ಮಕ ಸಮಸ್ಯೆಗಳ ಪರಿಹಾರ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!