ಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ ₹5,000 ಸಹಾಯಧನ ನೀಡುವ ಯೋಜನೆ ಜಾರಿಗೆ ತರುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗಾಗಿ ಸರ್ಕಾರ ₹5 ಕೋಟಿ ಅನುದಾನ ಮೀಸಲು ಇಟ್ಟಿದ್ದು, 2026-27ನೇ ಸಾಲಿನಿಂದ ಅನುಷ್ಠಾನಗೊಳ್ಳಲಿದೆ ಎಂದು ಹೇಳಿದರು.
ಇದಲ್ಲದೆ, ಕೈಲಾಸ ಮಾನಸ ಸರೋವರ ಯಾತ್ರೆಗೆ ₹30,000, ಚಾರ್ ಧಾಮ್ ಯಾತ್ರೆಗೆ ₹20,000 ಹಾಗೂ ಕಾಶಿ ಯಾತ್ರೆಗೆ ₹5,000 ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಅರ್ಚಕರಿಗೂ ವಿಶೇಷ ಸೌಲಭ್ಯ ಕಲ್ಪಿಸಲಾಗಿದ್ದು, ವರ್ಷಕ್ಕೆ ಸುಮಾರು 2,500 ಅರ್ಚಕರಿಗೆ ಉಚಿತ ಯಾತ್ರೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಯಾತ್ರೆಗೆ ತೆರಳಿದವರು ಫೋಟೋ ಅಪ್ಲೋಡ್ ಮಾಡಿದ ಬಳಿಕ ಸಹಾಯಧನವನ್ನು ನೇರವಾಗಿ ಅವರ ಮನೆಗೆ ನೀಡಲಾಗುತ್ತದೆ. ಈ ಯೋಜನೆ ‘ಫಸ್ಟ್ ಕಮ್, ಫಸ್ಟ್ ಸರ್ವ್’ ಆಧಾರದ ಮೇಲೆ ಜಾರಿಗೆ ಬರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.



