ನೇಣಿಗೆ ಕೊರಳೊಡ್ಡಿದ ಗ್ರಾಪಂ ಸದಸ್ಯೆ ಪುತ್ರ: ಸೂಸೈಡ್ ಗೆ ಕಾರಣ?

0
Spread the love

ಬೆಂಗಳೂರು/ಮಡಿಕೇರಿ:- ಮನೆಯಲ್ಲೇ ನೇಣು ಬಿಗಿದುಕೊಂಡು ಗ್ರಾಪಂ ಸದಸ್ಯೆ ಪುತ್ರ ಸೂಸೈಡ್ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಈತ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ನಿವಾಸಿ ಎನ್ನಲಾಗಿದೆ.

Advertisement

ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಚಂದ್ರಾವತಿ ದಂಪತಿ ಪುತ್ರ ಗಗನ್‌ (21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡ್ತಿದ್ದ ಗಗನ್ ಸೋಷಿಯಲ್‌ ಮೀಡಿಯಾದಲ್ಲೂ ಆಗಾಗ್ಗೆ ರೀಲ್ಸ್‌ ಮಾಡ್ತಿದ್ದ. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ. ಹೀಗಾಗಿ ಚಂದ್ರಾವತಿರವರು ನೆನ್ನೆ ರಾತ್ರಿಯೇ ಬೆಂಗಳೂರಿಗೆ ಬಸ್‌ ಹತ್ತಿದ್ದರು.

ತಾನು ಕೊಡಗಿನಿಂದ ಬರುತ್ತಿರುವ ವಿಷಯವನ್ನು ಕೂಡ ಮಗನಿಗೆ ತಿಳಿಸಿದ್ದರು. ಆದ್ರೆ ಚಂದ್ರಾವತಿ ಅವರು ಬೆಂಗಳೂರು ತಲುಪುವ ಮೊದಲೇ ಪ್ರೀತಿಯ ಪುತ್ರ ಗಗನ್ ನೇಣು ಬಿಗಿದು ಇಹಲೋಕ ತ್ಯಜಿಸಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here