ಎಣ್ಣೆ ಕುಡಿಯಲು ದುಡ್ಡು ಕೊಡದ ಅಜ್ಜಿ: ಬರ್ಬರವಾಗಿ ಕೊಂದೇ ಬಿಟ್ಟ ಪಾಪಿ!

0
Spread the love

ಚಿತ್ರದುರ್ಗ:- ಎಣ್ಣೆ ಕುಡಿಯಲು ಹಣ ಕೊಡದಿದ್ದಕ್ಕೆ  ಪಾಪಿ ಓರ್ವ ಅಜ್ಜಿಯನ್ನೇ ಕೊಲೆಗೈದ ಘಟನೆ ಚಿತ್ರದುರ್ಗದಲ್ಲಿ ಜರುಗಿದೆ.

Advertisement

70 ವರ್ಷದ ಲಕ್ಷ್ಮಮ್ಮ ಮೃತ ಅಜ್ಜಿ. ಮೃತ ಅಜ್ಜಿಯ ಓರ್ವ ಮಗ ಶ್ರೀನಿವಾಸ ಬೆಂಗಳೂರಿನಲ್ಲಿ ವಾಸವಾಗಿದ್ದರು. ತನ್ನ ತಾಯಿಗೆ ಆಸರೆಯಾಗಿರಲೆಂದು ಸಂಬಂಧಿಯಾದ ಸಂಜೀವ ರೆಡ್ಡಿ ಎಂಬಾತನನ್ನು ಮನೆಯಲ್ಲಿರುವಂತೆ ಹೇಳಿದ್ದನು. ಹೀಗಾಗಿ ಕಳೆದ ಒಂದು ತಿಂಗಳಿಂದ ಅಜ್ಜಿ ಮಾಡಿಟ್ಟ ಊಟ ಸವಿಯುತ್ತಿದ್ದ ಆಸಾಮಿ, ತನ್ನಲ್ಲಿದ್ದ ಹಣವೆಲ್ಲಾ ಖಾಲಿಯಾದ ಬಳಿಕ ಮದ್ಯಪಾನ ಮಾಡಲು ಹಣ ನೀಡುವಂತೆ ಅಜ್ಜಿಗೆ ದುಂಬಾಲು ಬಿದ್ದಿದ್ದನು.

ಆಗ ಇವನ ಮಾತಿಗೆ ತಲೆಕೆಡಿಸಿಕೊಳ್ಳದ ಅಜ್ಜಿಯ ಮೇಲೆ ಆಕ್ರೋಶಗೊಂಡು ಮಚ್ಚು, ದೊಣ್ಣೆ ಸೇರಿದಂತೆ ವಿವಿಧ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬರ್ಬರವಾಗಿ ಕೊಲೆಗೈದು ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here