ಬೆಂಗಳೂರು: ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ, ನಮ್ಮ ಸರ್ಕಾರ ಇರುವವರೆಗೆ ಗೃಹ ಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
Advertisement
ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೋಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ, ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ ಎಂದು ಹೇಳಿದರು.