ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಸುಕ್ಷೇತ್ರ ಮಾಢಳ್ಳಿ ಗ್ರಾಮದಲ್ಲಿ ಎ.27ರ ಸಂಜೆ 4.30ಕ್ಕೆ ಶ್ರೀ ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ನೂತನ ಮಠದ ಕಟ್ಟಡದ ಭೂಮಿಪೂಜಾ ಅಡಿಗಲ್ಲು ಸಮಾರಂಭ ಕಾರ್ಯಕ್ರಮ ಅಣ್ಣಿಗೇರಿ ದಾಸೋಹಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ವರವಿ ಮೌನೇಶ್ವರಮಠದ ಶ್ರೀ ಮೌನೇಶ್ವರ ಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಲಿದೆ.
Advertisement
ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಎಸ್.ವಿ. ಸಂಕನೂರ, ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಹೆಚ್.ಪಾಟೀಲ, ಗ್ರಾ.ಪಂ ಅಧ್ಯಕ್ಷ ಹನಮರಡ್ಡಿ ಹೊಂಬಳ, ಮುಳಗುಂದ ಪ.ಪಂ ಸದಸ್ಯ ಷಣ್ಮುಖಪ್ಪ ಬಡ್ಡಿ, ಗುರುನಾಥ ಕುರ್ತಕೋಟಿ ಸೇರಿದಂತೆ ಟ್ರಸ್ಟ್ ಕಮಿಟಿಯವರು, ಗ್ರಾಮದ ಗುರು-ಹಿರಿಯರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.