HomePolitics Newsಜಿ.ಎಸ್. ಪಾಟೀಲ್ ಸ್ಪೀಕರ್, ಪೊನ್ನಣ್ಣ ಡೆಪ್ಯುಟಿ ಸ್ಪೀಕರ್; ಸಲೀಂ ಅಹ್ಮದ್, ಉಮಾಶ್ರೀಗೆ ವಿಧಾನ ಪರಿಷತ್ ಜವಾಬ್ದಾರಿ

ಜಿ.ಎಸ್. ಪಾಟೀಲ್ ಸ್ಪೀಕರ್, ಪೊನ್ನಣ್ಣ ಡೆಪ್ಯುಟಿ ಸ್ಪೀಕರ್; ಸಲೀಂ ಅಹ್ಮದ್, ಉಮಾಶ್ರೀಗೆ ವಿಧಾನ ಪರಿಷತ್ ಜವಾಬ್ದಾರಿ

For Dai;y Updates Join Our whatsapp Group

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ನೂತನ ಸಚಿವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಜೊತೆಗೆ ವಿಧಾನಸಭೆ ಸ್ಪೀಕರ್, ಡೆಪ್ಯುಟಿ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳಿಗೂ ಎಐಸಿಸಿ ಅಂತಿಮ ನಿರ್ಧಾರ ಕೈಗೊಂಡಿದೆ.

ವಿಧಾನಸಭೆ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ವಿಧಾನಸಭೆ ಸ್ಪೀಕರ್ ಆಗಿದ್ದ ಯು.ಟಿ. ಖಾದರ್ ಅವರು ಈಗಾಗಲೇ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನು ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಆಗಿದ್ದ ರುದ್ರಪ್ಪ ಲಮಾಣಿ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ತಮ್ಮ ಹಾಲಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ವಿಧಾನ ಪರಿಷತ್ ಸಭಾಪತಿಯಾಗಿ ಪ್ರಸ್ತುತ ಬಸವರಾಜ ಹೊರಟ್ಟಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಎಐಸಿಸಿ ಹೊಸ ನಿರ್ಧಾರದ ಹಿನ್ನೆಲೆಯಲ್ಲಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಸ್ಥಾನ ತ್ಯಜಿಸುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ವರದಿಗಳನ್ನು ಹೊರಟ್ಟಿ ನಿರಾಕರಿಸಿದ್ದರು.

ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಬಹುಮತದ ಕೊರತೆ ಇರುವ ಸಂದರ್ಭದಲ್ಲಿ ಸಭಾಪತಿ ಸ್ಥಾನದಿಂದ ಹಿಂದೆ ಸರಿಯುವುದು ಸೂಕ್ತ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್‌ನ ಕೆಲವು ನಾಯಕರು ವ್ಯಕ್ತಪಡಿಸಿದ್ದರು.

ಇದೇ ವೇಳೆ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ತೀರ್ಪು ನೀಡಿದ ಬಳಿಕ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಹೀಗಾಗಿ ತೆರವಾಗಿರುವ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img