ಬೆಂಗಳೂರು:- PM ಮೋದಿ ಬಡವರಪರ ಇದ್ದಾರೆ ಎನ್ನುವುದಕ್ಕೆ GST ಸರಳೀಕರಣವೇ ಸಾಕ್ಷಿ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಜಿಎಸ್ಟಿ ಸರಳೀಕರಣ ಮಾಡಿ ಮೋದಿ ಸರ್ಕಾರ ದೇಶದ ಜನರಿಗೆ ಮೋದಿ ಸರ್ಕಾರ ದಸರಾ, ದೀಪಾವಳಿ ಉಡುಗೊರೆ ಕೊಟ್ಟಿದೆ. ಕ್ಯಾನ್ಸರ್ ಔಷಧಿಗಳ ಮೇಲೆ ಟ್ಯಾಕ್ಸ್ ರದ್ದು ಮಾಡಿದ್ದಾರೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಜಿಎಸ್ಟಿ ಇಳಿಸುವ ಕೆಲಸ ಮಾಡಿ, ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್, ಮೋದಿ ಅವರಿಗೆ ಧನ್ಯವಾದ ಹೇಳ್ತೀನಿ. ಜನರ ಪರವಾಗಿ ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.
ಇದೇ ವೇಳೆ ಅರಮನೆ ಮೈದಾನದಲ್ಲಿ ಆಯೋಜನೆ ಆಗಿರುವ ಮಿಲಾದ್ ಉನ್ ನಬಿ ಕಾರ್ಯಕ್ರಮಕ್ಕೆ ಸರ್ಕಾರ ಅವಕಾಶ ಕೊಡಬಾರದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಪುಷ್ಟೀಕರಣ ಮಾಡುತ್ತಿದೆ. ಬೆಂಗಳೂರಿಗೆ ಟೂರಿಸಂ ವೀಸಾ ಪಡೆದು ಧರ್ಮ ಪ್ರಚಾರ ಮಾಡುವ ಕೆಲಸ ಆಗ್ತಿದೆ. ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು. ಬಿಜೆಪಿ ಇದನ್ನು ಪ್ರಬಲವಾಗಿ ಖಂಡಿಸುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



