HomeCrime NewsCCB ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಕಿಡ್ನಾಪ್: ₹5 ಲಕ್ಷ ವಸೂಲಿಗೆ ಯತ್ನಿಸಿದ್ದ ರೌಡಿಶೀಟರ್ ಸೇರಿ...

CCB ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಕಿಡ್ನಾಪ್: ₹5 ಲಕ್ಷ ವಸೂಲಿಗೆ ಯತ್ನಿಸಿದ್ದ ರೌಡಿಶೀಟರ್ ಸೇರಿ ಐವರ ಬಂಧನ!

For Dai;y Updates Join Our whatsapp Group

ಬೆಂಗಳೂರು: ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್‌ನನ್ನು ಅಪಹರಿಸಿ ಹಣ ವಸೂಲಿ ಮಾಡಲು ಯತ್ನಿಸಿದ್ದ ಗ್ಯಾಂಗ್‌ವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ರೌಡಿಶೀಟರ್ ತ್ರಿವೇಣ್ ಕುಮಾರ್ ಅಲಿಯಾಸ್ ತಿರುಮಲ ಸೇರಿದಂತೆ ಐವರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತ್ರಿವೇಣ್ ಕುಮಾರ್ ಅಲಿಯಾಸ್ ತಿರುಮಲ, ರಂಜಿತ್ ರಾವ್, ನಮಿತ್, ಪ್ರೇಮ್ ಸಾಯಿ ಹಾಗೂ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಈ ಹಿಂದೆಯೂ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣದ ವಿವರಗಳ ಪ್ರಕಾರ, ಜಿಮ್ ಟ್ರೈನರ್ ಮಿಥುಲ್ ಆಟೋದಲ್ಲಿ ತೆರಳುತ್ತಿದ್ದ ವೇಳೆ ಆರೋಪಿಗಳು ತಮ್ಮನ್ನು ಸಿಸಿಬಿ ಪೊಲೀಸರು ಎಂದು ಪರಿಚಯಿಸಿಕೊಂಡು ಅವರನ್ನು ಬಲವಂತವಾಗಿ ಕಾರಿನೊಳಗೆ ಕೂರಿಸಿಕೊಂಡಿದ್ದಾರೆ. ಬಳಿಕ, “500 ಕೆಜಿ ಗಾಂಜಾ ತರಿಸಿದ್ದೀಯ” ಎಂದು ಬೆದರಿಸಿ, ಅವರ ಮೊಬೈಲ್ ಫೋನ್ ಹಾಗೂ ಬ್ಯಾಗ್ ಕಸಿದುಕೊಂಡಿದ್ದಾರೆ.

ಇದಾದ ಬಳಿಕ, ಎಲ್‌ಎಸ್‌ಡಿ ಸ್ಟ್ರಿಪ್‌ಗಳನ್ನು ಇಟ್ಟು ಫೋಟೋ ತೆಗೆದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ ಹಣ ನೀಡುವಂತೆ ಒತ್ತಡ ಹೇರಿದ್ದಾರೆ. ತಮ್ಮನ್ನು ನಿಜವಾದ ಪೊಲೀಸ್ ಅಧಿಕಾರಿಗಳೆಂದು ನಂಬಿಸಲು ಆರೋಪಿಗಳು ಜೆ.ಪಿ.ನಗರ ಪೊಲೀಸ್ ಠಾಣೆ ಬಳಿ ಕಾರು ನಿಲ್ಲಿಸಿ, ಇಬ್ಬರು ಠಾಣೆಯೊಳಗೆ ಹೋಗಿ ಬಂದು “ಸಾಹೇಬರು ಬ್ಯುಸಿಯಾಗಿದ್ದಾರೆ” ಎಂದು ಹೇಳಿ ನಾಟಕವಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ಮಿಥುಲ್ ಅವರನ್ನು ನಗರದ ವಿವಿಧ ಭಾಗಗಳಲ್ಲಿ ಕಾರಿನಲ್ಲಿ ಸುತ್ತಾಡಿಸಿ, ₹5 ಲಕ್ಷ ನೀಡದಿದ್ದರೆ ಡ್ರಗ್ಸ್ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಜೂನ್ 22ರಂದು ಶಂಕರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿ, ತಾಂತ್ರಿಕ ಸಾಕ್ಷ್ಯಗಳು ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img