ವಿಜಯಸಾಕ್ಷಿ ಸುದ್ದಿ, ಮುಳಗುಂದ: ಹಳ್ಳಿಯಿಂದ ದಿಲ್ಲಿವರೆಗೂ ಪರಿಚಿತರಾಗಿರುವ, ಪ್ರಭಾವಿ ರಾಜಕಾರಣಿ ಹಾಗೂ ಪರಿಶುದ್ಧ ಸೇವಕರೆಂದು ಗುರುತಿಸಿಕೊಂಡಿರುವ ಶಾಸಕ, ಮಾಜಿ ಸಚಿವ ಎಚ್.ಕೆ. ಪಾಟೀಲ ಅವರ 73ನೇ ಜನ್ಮದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಉಚಿತ ನೋಟು ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಂಜುಮನ್ ಸಂಸ್ಥೆ ಅಧ್ಯಕ್ಷ ತಾಜುದ್ದೀನ್ ಕಿಂಡ್ರಿ, ಇಂದಿರಾ ಗಾಂಧಿ ಅವರ ಕಾಲದಿಂದ ಇಂದಿನ ರಾಹುಲ್ ಗಾಂಧಿ ಅವರವರೆಗೆ ರಾಷ್ಟ್ರ ಮಟ್ಟದ ನಾಯಕರೊಂದಿಗೆ ಪರಿಚಯ ಹೊಂದಿರುವ ಎಚ್.ಕೆ. ಪಾಟೀಲ ಅವರು ಗದಗ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಅಭಿವೃದ್ಧಿಗೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹುಲಕೋಟಿಯ ಹುಲಿ ಎಂದೇ ಖ್ಯಾತರಾಗಿರುವ ಅವರು ಜನಪರ ಕಾಳಜಿ ಹಾಗೂ ಸೇವಾ ಮನೋಭಾವದಿಂದ ರಾಜಕೀಯ ಜೀವನದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದರು.
ಎಚ್.ಕೆ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಮೀದ್ ಮುಜಾವರ್, ಹೈದರಾಲಿ ಖವಾಸ, ಮುನ್ನಾ ಡಾಲಾಯತ್, ದಾವುದ ಜಮಾಲಸಾಬನವರ, ದಾವಲಸಾಬ, ಲಕ್ಷ್ಮೇಶ್ವರದ ಹಿರಿಯರಾದ ಹಸನಸಾಬ್ ಶೇಖ್, ಎ.ಎ. ಖಾಜಿ, ಲಾಲಾಶಪೀರ್ ಮಕಾಂದರ್, ಫಕೃಸಾಬ್ ಅಣ್ಣಿಗೇರಿ, ಖಲಂದರ್ ಗಾಡಿ, ಅಷ್ಪಾಕ್ ನದ್ದಿಮುಲ್ಲಾ, ಜೀಲಾನಿ ಶೇಖ್, ಮಕ್ತುಮಸಾಬ ನದಾಫ್, ಮಾಬುಲಿ ದುರ್ಗಿಗುಡಿ, ದಾವಲ್ ರಾಮಗಿರಿ, ಇಮಾಮಜಾಫರ್, ಲಾಡಸಾಬನವರ ಖಾನ್, ಲಾದಮ್ಮನವರ ಹುಸೇನ್, ಅಕ್ಕಿ ಜಾಫರ್, ಭದ್ರಾಪೂರ್ ಸೇರಿದಂತೆ ಶಾಲಾ ಮುಖ್ಯೋಪಾಧ್ಯಾಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.



