HomeKarnataka Newsರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ: ಹವಾಮಾನ ಇಲಾಖೆ

For Dai;y Updates Join Our whatsapp Group

Spread the love

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏಪ್ರಿಲ್ 1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ ಜಿಲ್ಲೆಯ ಹಲವು ಭಾಗಗಳಲ್ಲಿ ಬುಧವಾರ ಅರ್ಧ ಗಂಟೆಯಿಂತ ಹೆಚ್ಚುಕಾಲ ಧಾರಾಕಾರ ಮಳೆ ಸುರಿದಿದ್ದು, ಕೆಲವೆಡೆ ಗುಡುಗಿನ ಅಬ್ಬರದ ಜೊತೆಗೆ ಆಲಿಕಲ್ಲುಗಳೂ ಬಿದ್ದಿವೆ. ಖಾನಾಪುರ, ಬೆಳಗಾವಿ, ಹುಕ್ಕೇರಿ, ಸವದತ್ತಿ, ರಾಮದುರ್ಗ, ಯರಗಟ್ಟಿ, ಬೈಲಹೊಂಗಲ, ಮೂಡಲಗಿ ತಾಲ್ಲೂಕುಗಳಲ್ಲಿ ಸಾಧಾರಣ ಮಳೆ ದಾಖಲಾಗಿತ್ತು.

ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕಿನ ಅಂಡಾರು, ಕಾಡುಹೊಳೆ, ಮುನಿಯಾಲು, ಮುಟ್ಲುಪಾಡಿ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿಮಳೆಯಿಂದ ಹಾನಿ ಸಂಭವಿಸಿದ್ದು, ಅಜೆಕಾರು ಹಾಗೂ ಅಂಡಾರು ಪ್ರದೇಶದಲ್ಲಿ 30ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ.

ಆರೆಂಜ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಾರ್ಚ್ 26ರಿಂದ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಮಾರ್ಚ್ 26ರಂದು ಬಿರುಗಾಳಿ, ಗುಡುಗು ಮತ್ತು ಮಿಂಚಿನ ತೀವ್ರತೆಯು ಹೆಚ್ಚಾಗಿ ಕಾಣಿಸಿಕೊಳ್ಳಬಹುದು. ರೈತರು, ಕುರಿಗಾಹಿಗಳು ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ.

ಇದೊಂದಿಗೆ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾರ್ಚ್ 26ರಂದು ಸಾಧಾರಣ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!