ಮಂಡ್ಯ: ಶ್ರೀರಂಗಪಟ್ಟಣದಲ್ಲಿ ನಡೆದ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ವೇಳೆ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ಕಡೆ ನುಗ್ಗಲು ಯತ್ನಿಸಿದರು. ಪೊಲೀಸರು ಅವರನ್ನು ತಡೆಯುವ ಪ್ರಯತ್ನ ಮಾಡುವ ಸಂದರ್ಭದಲ್ಲಿ ಹನುಮ ಮಾಲಾಧಾರಿಗಳ ಹಾಗೂ ಪೊಲೀಸರು ನಡುವೆ ತಳ್ಳಾಟ-ನೂಕಾಟ ಉಂಟಾಯಿತು.
ಈ ವೇಳೆ ಹನುಮ ಮಾಲಾಧಾರಿಗಳು ಕೇಸರಿ ಧ್ವಜ ತಿರುಗಿಸಿ “ಮಸೀದಿ ಜಾಗ ನಮ್ಮದು” ಎಂದು ಘೋಷಿಸಿದರು ಮತ್ತು ಮಸೀದಿಯೊಳಗಿನ ಬೂದುಗುಂಬಳವನ್ನು ಒಡೆದು ಹನುಮಂತ ಎಂದು ಘೋಷಣೆ ಮಾಡಿದರು.
ಇನ್ನು ಹನುಮ ಮಾಲಾಧಾರಿಗಳ ಜಾಮಿಯಾ ಮಸೀದಿ ಮುಂದೆ ಕುಳಿತು ಭಜನೆ ಮಾಡಿದ್ದು, ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುತ್ತಿದ್ದಂತೆಯೇ ಎಚ್ಚೆತ್ತ SP ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರವೇಶಿಸಿ ಹನುಮ ಮಾಲಾಧಾರಿಗಳ ಮನವೊಲಿಸಿದರು. ಬಳಿಕ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ವೃತ್ತದಿಂದ ಮುಂದೆ ಸಾಗಿದರು.



