ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ್ರ ಬಣ ಗದಗ ಜಿಲ್ಲಾ ಘಟಕದ ನೇತೃತ್ವದಲ್ಲಿ ದಲಿತಪರ, ಕನ್ನಡಪರ, ಹಿಂದೂಪರ, ವಿವಿಧ ಜನಪರ ಹೋರಾಟಗಾರರ ಮುಂದಾಳತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾಧ್ಯಕ್ಷ ಮಂಜುನಾಥ ಪರ್ವತಗೌಡ್ರ ಮಾತನಾಡಿ, ಕರ್ನಾಟಕದ ಏಕೀಕರಣದ ಸ್ಮರಣಾರ್ಥವಾಗಿ ಇಂದು ಕರ್ನಾಟಕ ರಾಜ್ಯೋತ್ಸವವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ಈ ನಾಡು ಸಾಧು-ಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುವ ಹೆಮ್ಮೆಯ ಬೀಡಾಗಿದ್ದು, ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಡಾಗಿದೆ ಎಂದರು.
ವಕೀಲರ ಸಂಘದ ಉಪಾಧ್ಯಕ್ಷ ಎಂ.ಎಸ್. ಸಂಗನಾಳ ಮಾತನಾಡಿ, ಕರ್ನಾಟಕ ರಾಜ್ಯವು ಇಡೀ ದೇಶದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಅದರಲ್ಲೂ ಮಾಹಿತಿ ತಂತ್ರಜ್ಞಾನದಲ್ಲಿ, ಕಾಯ್ದೆ-ಕಾನೂನುಗಳ ವಿಷಯದಲ್ಲಿ ಐತಿಹಾಸಿಕ ಕೊಡುಗೆಯನ್ನು ನೀಡಿದೆ ಎಂದರು.
ಶ್ರೀರಾಮ ಸೇನೆ ಗದಗ ಜಿಲ್ಲಾಧ್ಯಕ್ಷ ರಾಜು ಖಾನಪ್ಪನವರ ಮಾತನಾಡಿ, ನಮ್ಮ ಸಮಾಜಗಳ ಶ್ರೀರಕ್ಷೆಯ ಜೊತೆಗೆ ಈ ನಾಡಿನ ರಕ್ಷಣೆಯೂ ಬಹುಮುಖ್ಯವಾಗಿದೆ. ನಾಡಿನ ವಿಷಯ ಬಂದಾಗ ನಾವೆಲ್ಲರೂ ಕಟಿಬದ್ಧರಾಗಿ ಈ ನಾಡಿಗಾಗಿ ಹೋರಾಡೋಣ ಎಂದರು.
ಇದೇ ಸಂದರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಾಜು ಖಾನಪ್ಪನವರ, ವಕೀಲರ ಸಂಘದ ಉಪಾಧ್ಯಕ್ಷ ಎಂ.ಎಸ್. ಸಂಗನಾಳ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ, ಶ್ರೀರಾಮ ಸೇನೆ ಮುಖಂಡರಾದ ಶಿವರಾಜ ಪೂಜಾರ, ನಗರಸಭಾ ಸದಸ್ಯ ಅನಿಲ ಅಬ್ಬಿಗೇರಿ, ಮಲ್ಲಿಕಾರ್ಜುನ ಕಿರೇಸೂರ ಸೇರಿದಂತೆ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಗೌರವಾಧ್ಯಕ್ಷ ಗುರುರಾಜ ಕಲಕೇರಿ, ಉತ್ತರ ಕರ್ನಾಟಕ ರೈತ ಜಿಲ್ಲಾಧ್ಯಕ್ಷ ಬಸಯ್ಯ ಗುಡ್ಡಿಮಠ, ಪರಶುರಾಮ ಬನ್ನೂರ, ವಾದಿರಾಜ ಕೌಜಲಗಿ, ಬಸವರಾಜ ದೇಸಾಯಿ, ಅಪ್ಪಣ್ಣ ಕಾಳೆ, ಬಸೀರ ಮುಳಗುಂದ, ಉದಯ ದಳವಾಯಿ, ಕರವೇ ಮಹಿಳಾ ಘಟಕದ ಪಾರ್ವತಿ ಪಾಟೀಲ, ಲಕ್ಷ್ಮೀ ಶಿವಶಿಂಪಿ, ಜ್ಯೋತಿ ರಾಮಣ್ಣವರ, ಗಾಂಧಿ ವೃತ್ತದ ಅಟೋ ಸ್ಟ್ಯಾಂಡಿನ ಚಾಲಕರು-ಮಾಲಕರು ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.


