ಬೆಂಗಳೂರು:- ಹನಿಟ್ರ್ಯಾಪ್ ಪ್ರಕರಣ ಪಕ್ಷಕ್ಕೆ ಮುಜುಗರ ತಂದಿದೆಯಾ ಎಂಬ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Advertisement
ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ಇದನ್ನು ನನಗೆ ಕೇಳಬೇಡಿ. ನೀವು ಯಾರನ್ನು ಕೇಳಬೇಕೋ ಎಂದುಕೊಂಡಿದ್ದೀರೋ ಅವರನ್ನು ಕೇಳಿ ಎನ್ನುವ ಮೂಲಕ ಡಿಕೆಶಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದರು.
ಇನ್ನೂ ಗೃಹ ಸಚಿವ ಪರಮೇಶ್ವರ್ ಅವರು ರಾಜಣ್ಣ ಅವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಾರೆ. ಗೃಹ ಸಚಿವರು ನಮ್ಮ ಪಕ್ಷದ ಹಿರಿಯ ಸಚಿವರು, ಪಕ್ಷದ ಅಧ್ಯಕ್ಷರು ಸಹ ಆಗಿದ್ದಾರೆ. ಅವರು ಸದನದಲ್ಲಿ ತನಿಖೆ ಮಾಡುತ್ತೇವೆ ಎಂದಿದ್ದರು. ಸಿಎಂ ಸಿದ್ದರಾಮಯ್ಯನವರು ಸಹ ತನಿಖೆ ನಡೆಸುವುದಾಗಿ ಹೇಳಿದ್ದರು. ಹೀಗಾಗಿ ಯಾರಿಗೆಲ್ಲ ಅನ್ಯಾಯ ಆಗಿದೆಯೋ ಅವರಿಗೆ ನ್ಯಾಯ ಕೊಡಿಸೋ ಕೆಲಸ ಪರಮೇಶ್ವರ್ ಮಾಡುತ್ತಾರೆ ಎಂದು ತಿಳಿಸಿದರು.