ಹಾಸನ:- ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಜರುಗಿದೆ.
Advertisement
ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತದೆ. ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ ಗೇಟ್ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.
ಗೇಟ್ ತೆಗೆದು ದೇವರಿಗೆ ಚಪ್ಪಲಿ ಹಾರ ಹಾಕಿರುವ ದುರುಳರ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಮು ಸೌಹಾರ್ದ ಕದಡಲು ಕೆಲವು ಕಿಡಿಗೇಡಿಗಳು ಇಂತಹ ದುಷ್ಕೃತ್ಯ ಎಸಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.