ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ತೆರೆ: ದೇವಾಲಯದ ಬಾಗಿಲು ಕ್ಲೋಸ್

0
Spread the love

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲನ್ನು ಇಂದು ಶಾಸ್ತ್ರೋಸ್ತವಾಗಿ ಮುಚ್ಚಲಾಗಿದೆ. ದೇವಾಲಯದ ಗರ್ಭಗುಡಿಯನ್ನು ಶಾಸಕ ಹೆಚ್.ಪಿ ಸ್ವರೂಪ್‍ಪ್ರಕಾಶ್, ಕೆ.ಎಂ.ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸಂಸದ ಶ್ರೇಯಸ್‍ಪಟೇಲ್, ಡಿಸಿ ಸಿ.ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿಯವರ ಸಮಾಕ್ಷಮದಲ್ಲಿ ಮುಚ್ಚಲಾಯಿತು. ಮುಂದಿನ ವರ್ಷ ಅಕ್ಟೋಬರ್ 9 ಕ್ಕೆ ಬಾಗಿಲು ತೆರೆಯಲಾಗುತ್ತದೆ.

Advertisement

ಪ್ರತಿ ವರ್ಷದಂತೆ ವಿಶ್ವ ರೂಪ ದರ್ಶನದ ಬಳಿಕ ನೆರೆದಿದ್ದ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಸಾರ್ವಜನಿಕ ದರ್ಶನ ಬೇಗ ಬಂದ್ ಮಾಡಿದ್ದರಿಂದ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮುಂದಿನ ವರ್ಷ 2025 ಅ.9 ರಿಂದ ಅ.23 ರವರೆಗೆ ಹಾಸನಾಂಬೆ ದರ್ಶನೋತ್ಸವ ನಿಗದಿಯಾಗಿದೆ.

ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ

ಇನ್ನು ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರೆ, ಕೋಟ್ಯಾಂತರ ರೂಪಾಯಿ ಆದಾಯ ಸಹ ಹರಿದುಬಂದಿದೆ. 9 ದಿನ ಸಾರ್ವಜನಿಕ ದರ್ಶನದಲ್ಲಿ ಬರೋಬ್ಬರಿ 9.3 ಕೋಟಿ ರೂ. ಹಣ ಸಂಗ್ರಹವಾಗಿದೆ. ಅದು ಕೇವಲ 1000 ರೂ, 300 ರೂ ಟಿಕೇಟ್ ಮಾರಾಟ ಹಾಗು ಲಡ್ಡು ಪ್ರಸಾದ ಮಾರಾಟ ದಿಂದ 9.3 ಕೋಟಿ ಆದಾಯ ಬಂದಿದೆ.

ಇನ್ನೂ ಹುಂಡಿ ಕಾಣಿಕೆ ಎಣಿಕೆ ಮಾಡಿಲ್ಲ. ಹುಂಡಿ ಎಣಿಕೆ ನಂತರ ಒಟ್ಟು ಎಷ್ಟು ಆದಾಯ ಬಂದಿದೆ ಎನ್ನುವುದು ಗೊತ್ತಾಗಲಿದೆ. ಕೇವಲ ಟಿಕೆಟ್, ಪ್ರಸಾದಿಂದಲೇ 9 ಕೋಟಿ ರೂ. ಬಂದಿದೆ ಅಂದರೆ ಹುಂಡಿಯಲ್ಲಿ ಎಷ್ಟು ಜಮಾ ಆಗಿದೆ ಎನ್ನುವುದನ್ನು ಕಾದುನೋಡಬೇಕಿದೆ.


Spread the love

LEAVE A REPLY

Please enter your comment!
Please enter your name here