ಹಾವೇರಿ: ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
Advertisement
ಶಿವಾನಂದ ಕುನ್ನೂರು (40) ಮೃತ ದುರ್ಧೈವಿಯಾಗಿದ್ದು, ಶಿವಾನಂದ ಕುನ್ನೂರು ಹೊಟೇಲ್ನಲ್ಲಿ ಊಟ ಮಾಡಿ ವಾಪಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ 6 ರಿಂದ 7 ಜನರು ಅಟ್ಯಾಕ್ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಆಸ್ತಿ ವ್ಯಾಜ್ಯದಿಂದ ಕೊಲೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪ ಮಾಡಿದ್ದು, ಇನ್ನೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.