ರಾಜ್ಯಪಾಲರು ಪ್ರಾಸಿಕ್ಯೂಷನ್ʼಗೆ ಅನುಮತಿ ಕೊಡ್ತಾರೆಂದು HDK ಭಯ ಪಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

0
Spread the love

ಕೊಪ್ಪಳ: ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡ್ತಾರೆಂದು ಕುಮಾರಸ್ವಾಮಿ ಭಯ ಪಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳೀದ್ದಾರೆ.  ಕೊಪ್ಪಳ ತಾಲೂಕಿನ ಗಿಣಗೇರಾ ಏರ್​ಸ್ಟ್ರಿಪ್​​ನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅರೆಸ್ಟ್ ಮಾಡಿ ಅಂತ ನಾನು ಎಲ್ಲೂ ಹೇಳಿಲ್ಲ, ಅಂತಹ ಸನ್ನಿವೇಶ ಬಂದ್ರೆ ಯಾವುದೇ ಮುಲಾಜಿಲ್ಲದೇ ಅರೆಸ್ಟ್ ಮಾಡ್ತೇವೆ. ಕುಮಾರಸ್ವಾಮಿ ಭಯ ಪಟ್ಟಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡ್ತಾರೆಂದು ಭಯ ಪಟ್ಟಿದ್ದಾರೆ.

Advertisement

ಪ್ರಾಸಿಕ್ಯೂಷನ್​​ಗೆ ನಾವು ಕೇಳಿಲ್ಲ, ಖಾಸಗಿಯವರು ಸಹ ಕೇಳಿಲ್ಲ. ಎಸ್​​ಐಟಿ ಹಾಗೂ ಲೋಕಾಯುಕ್ತ ತನಿಖೆ ಮಾಡಿ ಸಾಕ್ಷ್ಯ ಸಂಗ್ರಹ ಮಾಡಿ ಪ್ರಾಸಿಕ್ಯೂಷನ್​​ಗೆ ಅನುಮತಿ ಕೇಳಿದ್ದಾರೆ. ಅದರ ಅರ್ಥ ಕುಮಾರಸ್ವಾಮಿ ವಿರುದ್ಧ ಸಾಕ್ಷಿಗಳು ಇವೆ ಅಂತಾ. ತನಿಖೆ ಮಾಡಿ, ಸಾಕ್ಷಿ ಇದ್ದರೂ ಸಹ ಬಿಟ್ಟುಬಿಡಬೇಕಾ? ರಾಜ್ಯಪಾಲರು ತಾರತಮ್ಯ ಮಾಡಿದ್ದಾರೆ,

ನನಗೆ ನೋಟಿಸ್ ಕೊಟ್ರು, ಟಿ.ಜೆ.ಅಬ್ರಹಾಂ ಕೊಟ್ಟ ಪತ್ರದ ಮೇಲೆ ಅವತ್ತೇ ನೋಟಿಸ್ ನೀಡಿದ್ದಾರೆ. ಆದರೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಯಾಕೆ ನೋಟಿಸ್​ ಕೊಡಲಿಲ್ಲ? ಲೋಕಾಯುಕ್ತ ತನಿಖೆ ಮಾಡಿ ಪ್ರಾಶಿಕ್ಯೂಷನ್​ಗೆ ಕೇಳಿದ್ರೂ ಕೊಟ್ಟಿಲ್ಲ. ಕುಮಾರಸ್ವಾಮಿ ಸುಳ್ಳು ಹೇಳಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here