ಮೇಕೆದಾಟು ಯೋಜನೆ ತಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಎಂಬ HDK ಹೇಳಿಕೆ ಸರಿಯಲ್ಲ: MB ಪಾಟೀಲ್!

0
Spread the love

ಬೆಂಗಳೂರು:- ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ರಾಜಕೀಯ ಮಾಡಿಕೊಂಡು ಕೂರಬಾರದು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಇದನ್ನು ಮನಗಂಡು, ರಚನಾತ್ಮಕವಾಗಿ ಕೆಲಸ ಮಾಡಲಿ ಎಂದರು. ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಬಂದರೆ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಹೀಗೆ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ. ಈ ಸತ್ಯ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.

ಕುಮಾರಸ್ವಾಮಿಯವರು ಮೇಕೆದಾಟು ಯೋಜನೆ ತಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಎಂದಿದ್ದಾರೆ. ಇದು ಸರಿಯಲ್ಲ. ಈ ಯೋಜನೆ ಜಾರಿಯಿಂದ ಸಂಕಷ್ಟದ ಸಮಯದಲ್ಲಿ ನೀರು ಸಿಗುತ್ತದೆ ಎನ್ನುವುದು ತಮಿಳುನಾಡಿನ ರಾಜಕೀಯ ಪಕ್ಷಗಳಿಗೂ ಗೊತ್ತು. ಆದರೆ ಅವರು ಸಹ ರಾಜಕೀಯಕ್ಕಾಗಿ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಇಂತಹ ಧೋರಣೆಗಳನ್ನು ಎಲ್ಲರೂ ಬಿಟ್ಟರೆ ಜನರಿಗೆ ಒಳ್ಳೆಯದಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here