ಮೊಟ್ಟೆ ಏಟಿಗೆ ತಲೆ ಪೆಟ್ಟು: ಆಸ್ಪತ್ರೆಯಿಂದ ಬಿಜೆಪಿ ಶಾಸಕ ಮುನಿರತ್ನ ಡಿಸ್ಚಾರ್ಜ್!

0
Spread the love

ಬೆಂಗಳೂರು:- ಮೊಟ್ಟೆ ಏಟಿಗೆ ತಲೆಗೆ ಪೆಟ್ಟಾದ ಹಿನ್ನೆಲೆ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಡಿಸ್ಚಾರ್ಜ್ ಆಗಿದ್ದಾರೆ.

Advertisement

ಮಲ್ಲೇಶ್ವರದ ಕೆಸಿ ಜನರಲ್‌ ಆಸ್ಪತ್ರೆಯಿಂದ ಮುನಿರತ್ನ ಡಿಸ್ಚಾರ್ಜ್ ಆಗಿದ್ದಾರೆ. ಮೊಟ್ಟೆ ಏಟಿನಿಂದ ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿಯನ್ನು ಆಸ್ಪತ್ರೆಯಲ್ಲಿ ಕಳೆದಿದ್ದ ಮುನಿರತ್ನ ಇಂದು ಬೆಳಗ್ಗೆ ಡಿಸ್ಚಾರ್ಜ್‌ ಆಗಿದ್ದಾರೆ.

ಈ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೇ ಹಾಗೆ ತೆರಳಿದ್ದಾರೆ. ಈಗ ನಾನು ಏನು ಹೇಳುವುದಿಲ್ಲ. ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here