20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಮಾಸ್ಟರ್ !

0
Spread the love

ಕೊಡಗು:- ಇಪ್ಪತ್ತು ಸಾವಿರ ಲಂಚ ಪಡೆಯುವಾಗ ಹೆಡ್ ಮಾಸ್ಟರ್ ಲೋಕ ಬಲೆಗೆ ಬಿದ್ದಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆಯಲ್ಲಿ ಜರುಗಿದೆ.

Advertisement

ಮಾಲ್ದಾರೆ ದಿಡ್ಡಳ್ಳಿ ಆಶ್ರಮ ಶಾಲೆಯ ಸಿದ್ಧಲಿಂಗಶೇಟ್ಟಿ ಲೋಕಾಬಲೆಗೆ ಬಿದ್ದ ಹೆಡ್ ಮಾಸ್ಟರ್ ಎನ್ನಲಾಗಿದೆ. ಅತಿಥಿ ಶಿಕ್ಷಕರು ಹಾಗೂ ಅಡುಗೆ ಸಹಾಯಕರ ನೇಮಕಕ್ಕೆ ಮಾಸ್ಟರ್ ಹಣದ ಬೇಡಿಕೆ ಇಟ್ಟಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಲೋಕಾ ಅಧಿಕಾರಿಗಳು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

DYSP ಪ್ರಕಾಶ್ ಕೆ‌.ಸಿ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಲೋಕೆಶ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here