ಉಗ್ರರ ದಾಳಿ ವಿಷ್ಯ ಕೇಳಿ ಮೈಯಲ್ಲಿ ರಕ್ತ ಕುದಿಯುತ್ತಿದೆ: ಶ್ರೀಮುರುಳಿ!

0
Spread the love

ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶ್ರೀ ಮುರುಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಉಗ್ರರ ದಾಳಿ ಬಗ್ಗೆ ಕೆಂಡಕಾರಿದ್ದಾರೆ. ಪಹಲ್ಗಾಮ್ ದಾಳಿಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ನೋವಾಗ್ತಿದೆ. ಇದನ್ನೆಲ್ಲಾ ಯಾರು ಮಾಡಿದ್ದಾರೋ ಅವರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು. ಅಲ್ಲಿ ಸಮಾಧಾನವಿಲ್ಲ. ಈ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ.

Advertisement

ಒಬ್ಬ ನಾಗರೀಕನಾಗಿ ಹೇಳಬೇಕು ಅಂದರೆ ಉಗ್ರರ ದಾಳಿ ವಿಷ್ಯ ಕೇಳಿ ಮೈಯಲ್ಲಿ ರಕ್ತ ಕುದಿಯುತ್ತಿದೆ. ಅವರ ಸಂಹಾರ ಆಗೋವರೆಗೂ ನಮಗೆ ನೆಮ್ಮದಿಯಿಲ್ಲ. ಅಮಾಯಕರ ಜೀವ ತೆಗೆದಿದ್ದಾರೆ. ಅದಕ್ಕೆ ಉಗ್ರರ ಅಂತ್ಯ ಆಗಲೇಬೇಕು ಎಂದು ಶ್ರೀಮುರಳಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here