ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶ್ರೀ ಮುರುಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಉಗ್ರರ ದಾಳಿ ಬಗ್ಗೆ ಕೆಂಡಕಾರಿದ್ದಾರೆ. ಪಹಲ್ಗಾಮ್ ದಾಳಿಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ನೋವಾಗ್ತಿದೆ. ಇದನ್ನೆಲ್ಲಾ ಯಾರು ಮಾಡಿದ್ದಾರೋ ಅವರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು. ಅಲ್ಲಿ ಸಮಾಧಾನವಿಲ್ಲ. ಈ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ.
ಒಬ್ಬ ನಾಗರೀಕನಾಗಿ ಹೇಳಬೇಕು ಅಂದರೆ ಉಗ್ರರ ದಾಳಿ ವಿಷ್ಯ ಕೇಳಿ ಮೈಯಲ್ಲಿ ರಕ್ತ ಕುದಿಯುತ್ತಿದೆ. ಅವರ ಸಂಹಾರ ಆಗೋವರೆಗೂ ನಮಗೆ ನೆಮ್ಮದಿಯಿಲ್ಲ. ಅಮಾಯಕರ ಜೀವ ತೆಗೆದಿದ್ದಾರೆ. ಅದಕ್ಕೆ ಉಗ್ರರ ಅಂತ್ಯ ಆಗಲೇಬೇಕು ಎಂದು ಶ್ರೀಮುರಳಿ ಹೇಳಿದ್ದಾರೆ.



