ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಗದೀಶ ಭಟ್ ಜೋಶಿ ಇವರಿಗೆ ಶ್ರವಣ ಸಾಧನ ಯಂತ್ರವನ್ನು ವಿತರಿಸಿದರು.
ನಂತರ ಮಾತನಾಡಿದ ಎಸ್.ವಿ. ಸಂಕನೂರ, ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಸೌಲಭ್ಯ ಹಾಗೂ ಯೋಜನೆಗಳನ್ನು ನೀಡುತ್ತಿದೆ. ಅವುಗಳನ್ನು ಅರ್ಹರು ಇಲಾಖೆಗೆ ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಲು ಮುಂದಾಗಬೇಕು. ಇಲಾಖಾಧಿಕಾರಿಗಳು ಬಂದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಯೋಜನೆಗಳ ಲಾಭ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಹಾಂತೇಶ್ ಕೆ ಮುಂತಾದವರು ಹಾಜರಿದ್ದರು.



