ಹಾಸನ:- ಹಾಸನದಲ್ಲಿ ಹೃದಯಾಘಾತದ ಸರಣಿ ಸಾವಿನ ಸಂಖ್ಯೆ ಮುಂದುವರಿದಿದೆ. ಇದೀಗ ಹೃದಯಾಘಾತಕ್ಕೆ ಮತ್ತೊಂದು ಬಲಿ ಆಗಿದ್ದು, ಹಾಸನದ ಕರಿಗೌಡ ಕಾಲೋನಿಯಲ್ಲಿ ಘಟನೆ ಜರುಗಿದೆ.
Advertisement
ಸಂಪತ್ ಕುಮಾರ್ (53) ಮೃತ ವ್ಯಕ್ತಿ. ಮೃತ ಸಂಪತ್ ಕುಮಾರ್ ಗೆ ಮೊದಲು ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹಿಮ್ಸ್ ಆಸ್ಪತ್ರೆಗೆ ಮನೆಯವರು ಕರೆದೊಯ್ದಿದ್ದಾರೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಸಂಪತ್ ಕುಮಾರ್ ಸಾವನ್ನಪ್ಪಿದ್ದಾರೆ.
ಈ ಮೂಲಕ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ. ಕಳೆದ 42 ದಿನಗಳಲ್ಲಿ ಒಟ್ಟು 28 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ಆತಂಕ ಹುಟ್ಟು ಹಾಕಿದೆ.