ಚಾಮರಾಜನಗರದಲ್ಲೂ ಹೃದಯಾಘಾತ ಭೀತಿ: ಕೋಲ್ಡ್ ಜ್ಯೂಸ್ ಕುಡಿಯುತ್ತಿದ್ದಂತೆ ಕುಸಿದು ‘ಚಾಲಕ’ ಸಾವು!

0
Spread the love

ಚಾಮರಾಜನಗರ;- ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಖಾಸಗಿ ಬಸ್ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ರಮೇಶ್ (೪೭) ಮೃತ ಚಾಲಕ.

Advertisement

ಮೃತ ರಮೇಶ್, ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಿಂದ ಕೊಳ್ಳೇಗಾಲಕ್ಕೆ ಬಸ್ ಚಾಲನೆ ಮಾಡಿಕೊಂಡು ತೆರಳುತ್ತಿದ್ದಾಗ ಮಧುವನಹಳ್ಳಿ ಗ್ರಾಮದ ಬಳಿ ಎದೆ ನೋವು ಕಾಣಿಸಿಕೊಂಡಿದೆ. ಚಾಲಕ ರಮೇಶ್ ತಕ್ಷಣ ಬಸ್ ನಿಲ್ಲಿಸಿ ಆಟೋದ ಮೂಲಕ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿದ್ದ ಸಿಬ್ಬಂದಿಗಳು ಊಟದ ವ್ಯತ್ಯಾಸದಿಂದ ಎದೆ ಉರಿ ಕಾಣಿಸಿಕೊಂಡಿರಬಹುದು ಎಂದು ತಿಳಿಸಿದ್ದಾರೆ.

ನಂತರ ಚಾಲಕ ರಮೇಶ್ ಖಾಸಗಿ ಬಸ್ ನಿಲ್ದಾಣದಲ್ಲಿ ತೆರಳಿ ಕೋಲ್ಡ್ ಜ್ಯೂಸ್ ಕುಡಿಯುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಜನನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರ ವೇಳೆಗೆ ಚಾಲಕ ಮೃತಪಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here