ಮಂಡ್ಯ: ಸಂಚಾರಿ ಪೊಲೀಸರ ಎಡವಟ್ಟಿಗೆ ಮಗು ಬಲಿಯಾಗಿರುವ ಘಟನೆ ಮಂಡ್ಯದ ನಂದ ಸರ್ಕಲ್ ಬಳಿ ನಡೆದಿದೆ. ರಿತೀಕ್ಷಾ ಮೃತ ದುರ್ದೈವಿಯಾಗಿದ್ದು, ವಾಣಿ-ಅಶೋಕ್ ಎಂಬುವವರ ಮಗು ಮೃತಪಟ್ಟಿದೆ.
Advertisement
ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ರಿತೀಕ್ಷಾಗೆ ೀ ವೇಳೆ ಹೆಲ್ಮೆಟ್ ತಪಾಸಣೆಗಾಗಿ ಸಂಚಾರಿ ಪೊಲೀಸರು ಬೈಕ್ ಅಡ್ಡಗಟ್ಟಿದ್ದು, ದಂಪತಿ ಸೇರಿ ಪುತ್ರಿ ದಿಢೀರ್ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಮಗುವಿನ ತಲೆ ರಸ್ತೆಗೆ ಬಡಿದು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡರು. ರಸ್ತೆಯಲ್ಲೇ ಮಗುವನ್ನು ಮಡಿಲಲ್ಲಿಟ್ಟು ತಾಯಿ ಗೋಳಾಡಿದ್ದಾರೆ. ಮಂಡ್ಯ ಸಂಚಾರಿ ಪೊಲೀಸರಿಗೆ ಹೆತ್ತಕರುಳು ಹಿಡಿಶಾಪ ಹಾಕಿದ್ದಾರೆ.