ಮುಂದುವರಿದ ಧಾರಕಾರ ಮಳೆ: ಕೊಡಗಿನ ಶಾಲಾ-ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಣೆ!

0
Spread the love

ಕೊಡಗು:– ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರಿದ ಹಿನ್ನೆಲೆ ಕೊಡಗಿನ ಶಾಲಾ-ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟ್ ರಾಜ ಆದೇಶ ಹೊರಡಿಸಿದ್ದಾರೆ.

Advertisement

ಕಳೆದ ಕೆಲ ದಿನಗಳಿಂದ ಕೊಡಗು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅದರಂತೆ ಜಿಲ್ಲೆಯಲ್ಲಿ ನಾಳೆಯೂ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ.

ಇನ್ನೂ ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. 80 ವರ್ಷಗಳ ಬಳಿಕ ಜೂನ್ ತಿಂಗಳಲ್ಲಿ ಕೆಆರ್‌ಎಸ್ ಭರ್ತಿ ಆಗುತ್ತಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ಗೆ 50,000 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಹಾರಂಗಿ ಹಾಗೂ ಹೇಮಾವತಿ ಡ್ಯಾಮ್‌ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here