HomeKarnataka Newsಹುಬ್ಬಳ್ಳಿಯಲ್ಲಿ ರಣಭೀಕರ ಮಳೆ: ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ! ಗದಗನಲ್ಲೂ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚನೆ

ಹುಬ್ಬಳ್ಳಿಯಲ್ಲಿ ರಣಭೀಕರ ಮಳೆ: ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ! ಗದಗನಲ್ಲೂ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚನೆ

For Dai;y Updates Join Our whatsapp Group

Spread the love

ಹುಬ್ಬಳ್ಳಿ:- ನಾಡಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅದೇ ರೀತಿ ಹುಬ್ಬಳ್ಳಿಯು ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದು, ವ್ಯಕ್ತಿಯೋರ್ವ ನೀರಲ್ಲಿ ಕೊಚ್ಚಿ ಹೋಗಿದ್ದಾನೆ. ಈ ಘಟನೆ ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಜರುಗಿದೆ.

ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ಹುಸೇನ ಕಳಸ ಎಂದು ಗುರುತಿಸಲಾಗಿದೆ. ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಈ ಘಟನೆ ಜರುಗಿದೆ. ನೀರಿನಲ್ಲಿ ಆಯತಪ್ಪಿ ವ್ಯಕ್ತಿ ಬಿದ್ದ ಹಿನ್ನೆಲೆ ಈ ಅವಘಡ ಸಂಭವಿಸಿದೆ. ಘಟನೆ ಬೆನ್ನಲ್ಲೇ ಪೊಲೀಸರಿಂದ ತೀವ್ರ ಹುಡುಕಾಟ ನಡೆದಿದ್ದು, ಇದುವರೆಗೆ ವ್ಯಕ್ತಿ ಪತ್ತೆಯಾಗಿಲ್ಲ. ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಳೆ ಆರ್ಭಟ:

ಇನ್ನೂ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಧಾರವಾಡ ಜಿಲ್ಲೆ ಕೂಡ ಧಾರಾಕಾರ ಮಳೆಯಿಂದ ಅಕ್ಷರಶಃ ನಲುಗಿದೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅದೇ ರೀತಿ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲೂ ಭಾರೀ ಪ್ರಮಾಣದಲ್ಲಿ ಮನೆಗಳಿಗೆ ಮಳೆನೀರು ಹರಿದುಬಂದಿದೆ. ಈ ಮಧ್ಯೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದೆ.

ಗದಗನಲ್ಲೂ ಭರ್ಜರಿ ಮಳೆ

ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಅಬ್ಬರ ಜೋರಾಗಿದ್ದು, ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಸೂಚನೆ ನೀಡಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದ್ದು,
ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಇರುವ ಬೆಣ್ಣೆ ಹಳ್ಳದ ಸೇತುವೆ ಜಲಾವೃತವಾಗಿದೆ. ಇದರಿಂದಾಗಿ
ನರಗುಂದ-ರೋಣ ಸಂಪರ್ಕ ಕಡಿತಗೊಂಡಿದೆ. ಅಷ್ಟೇ ಅಲ್ಲದೆ ಬೆಣ್ಣೆ ಹಳ್ಳದ ದಡದಲ್ಲಿ ಇರುವ ಗ್ರಾಮಸ್ಥರು ಪ್ರವಾಹದ ಭೀತಿ ಎದುರಿಸುವಂತಾಗಿದೆ. ಮೆಣಸಗಿ-ಹೊಳೆಆಲೂರು ಸೇತುವೆ ಕೂಡ ಜಲಾವೃತವಾಗಿದೆ.

ಜಿಲ್ಲೆಯ ಹಲವೆಡೆ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಆಗಿದೆ. ರಾತ್ರಿಯಿಡೀ ಮಳೆ ನೀರು ಮನೆಯಿಂದ ಹೊರಗೆ ಹಾಕಲು ಜನರು ಹರಸಾಹಸ ಪಟ್ಟರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!