ಬೆಂಗಳೂರು:- ಕರ್ನಾಟಕದಲ್ಲಿ ಜು.2ರಿಂದ 4 ದಿನ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಳೆದೆರೆಡು ವಾರದಿಂದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಸದ್ಯ ಹವಾಮಾನ ಇಲಾಖೆ ಮಳೆ ಮೂನ್ಸುಚನೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಮಳೆಯಾಗುವ ಬಗ್ಗೆ ಸಾಧ್ಯತೆಯಿದೆ ಎಂದು ಎಚ್ಚರಿಕೆ ಕೊಟ್ಟಿದೆ.
ನಾಳೆ ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಜು.2ರಿಂದ 5ರವರೆಗೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



